ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ: ಟಿಎಂಸಿ ಸಂಸದ ಅಮಾನತು

Prasthutha|

ದೆಹಲಿ: ರಾಜ್ಯಸಭೆಯಲ್ಲಿ ಅಶಿಸ್ತಿನ ವರ್ತನೆ ತೋರಿಸಿದ್ದಕ್ಕಾಗಿ ಟಿಎಂಸಿ ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ಅಧಿವೇಶದಿಂದ ಅಮಾನತು ಮಾಡಲಾಗಿದೆ.

- Advertisement -

ಸಭಾನಾಯಕ ಪಿಯೂಷ್ ಗೋಯಲ್ ಅವರು ಸದನದ ಕಲಾಪಗಳಿಗೆ ನಿರಂತರವಾಗಿ ತೊಂದರೆ ನೀಡಿದ್ದಕ್ಕಾಗಿ, ಸಭಾಪತಿಗೆ ಅವಿಧೇಯತೆ ಮತ್ತು ಸದನದಲ್ಲಿ ಗದ್ದಲ ಸೃಷ್ಟಿಸಿದ್ದಕ್ಕಾಗಿ ಸಂಸದ ಡೆರೆಕ್ ಒ’ಬ್ರಿಯಾನ್ ಅವರನ್ನು ಅಮಾನತುಗೊಳಿಸುವಂತೆ ಮನವಿ ಮಾಡಿದರು. ಅಮಾನತು ಆದೇಶದ ನಂತರ ಭಾರೀ ಗದ್ದಲದ ನಡುವೆ ಅಧಿವೇಶವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಲಾಯಿತು.

Join Whatsapp