ಇರಾನ್ ಅಧ್ಯಕ್ಷರ ನಿಧನಕ್ಕೆ ಇಂದು ಭಾರತದಲ್ಲಿ ಒಂದು ದಿನದ ಶೋಕಾಚರಣೆ

Prasthutha|

ನವದೆಹಲಿ: ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ಇಂದು (ಮೇ 21) ಭಾರತದಲ್ಲಿ ಒಂದು ದಿನದ ಶೋಕಾಚರಣೆಯನ್ನು ಆಚರಿಸಲು ನಿರ್ಧರಿಸಲಾಗಿದೆ.
ಗೃಹ ಸಚಿವಾಲಯ ಹೇಳಿಕೆ ಬಿಡುಗಡೆ ಮಾಡಿದ್ದು,ಅಗಲಿದ ಗಣ್ಯರಿಗೆ ಗೌರವದ ಸಂಕೇತವಾಗಿ, ಮೇ 21 ರಂದು ಭಾರತದಾದ್ಯಂತ ಒಂದು ದಿನದ ರಾಜ್ಯ ಶೋಕಾಚರಣೆ ನಡೆಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ಹೇಳಲಾಗಿದೆ.

- Advertisement -

ರಾಷ್ಟ್ರಧ್ವಜವನ್ನು ನಿಯಮಿತವಾಗಿ ಹಾರಿಸುವ ಭಾರತದಾದ್ಯಂತದ ಎಲ್ಲಾ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಮಟ್ಟದಲ್ಲಿ ಹಾರಾಡುತ್ತದೆ ಮತ್ತು (ಮಂಗಳವಾರ) ಯಾವುದೇ ಅಧಿಕೃತ ಮನರಂಜನೆ ಇರುವುದಿಲ್ಲ ಎಂದು ತಿಳಿಸಿದೆ.



Join Whatsapp