ಕಾಂಗ್ರೆಸ್’ನ ಅಗ್ರಗಣ್ಯ ನಾಯಕರು ಸಿದ್ದರಾಮಯ್ಯನವರ ರಾಜೀನಾಮೆ ಪಡೆಯುವ ಉತ್ಸಾಹದಲ್ಲಿದ್ದಾರೆ: ವಿಜಯೇಂದ್ರ

Prasthutha|

ಬೆಂಗಳೂರು: ಕಾಂಗ್ರೆಸ್ ಪಕ್ಷದ ಅಗ್ರಗಣ್ಯ ನಾಯಕರು ಸಿದ್ದರಾಮಯ್ಯನವರ ರಾಜೀನಾಮೆ ಪಡೆಯುವ ಉತ್ಸಾಹದಲ್ಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.

- Advertisement -


ಇಂದು ಮೈಸೂರು ಚಲೋ ಪಾದಯಾತ್ರೆಯು ಮುಂದುವರೆಯಿತು. ಈ ಸಂದರ್ಭದಲ್ಲಿ ಅವರು ಮಾಧ್ಯಮವೊಂದರ ಪ್ರತಿನಿಧಿ ಜೊತೆ ಮಾತನಾಡಿದರು. ನಮ್ಮ ಹೋರಾಟದ ಪರಿಣಾಮವಾಗಿ ಸಿದ್ದರಾಮಯ್ಯನವರು ಮನೆಗೆ ಹೋಗಬೇಕಾಗುತ್ತದೆ ಎಂದರು.


ಮೈಸೂರು ಚಲೋ ಬೃಹತ್ ಪಾದಯಾತ್ರೆಯು ಆರನೇ ದಿನಕ್ಕೆ ಕಾಲಿಟ್ಟಿದೆ. ಪಾದಯಾತ್ರೆಯೆಂಬ ಜನಾಂದೋಲನದಿಂದ ಸಿದ್ದರಾಮಯ್ಯನವರು ಕುರ್ಚಿ ಖಾಲಿ ಮಾಡಬೇಕಾಗುತ್ತದೆ. ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ ಎಂದು ನುಡಿದರು.

- Advertisement -


ಪೊಳ್ಳು ಭರವಸೆಗಳನ್ನು ನೀಡಿ ಅಧಿಕಾರಕ್ಕೆ ಬಂದ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರದ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿದೆ. ಅವರ ಭರವಸೆಗಳೆಲ್ಲ ಹುಸಿಯಾಗಿವೆ. ಜನರು ಸರಕಾರದ ಬಗ್ಗೆ ವಿಶ್ವಾಸವನ್ನು ಕಳಕೊಂಡಿದ್ದಾರೆ.ಭ್ರಷ್ಟಾಚಾರದಲ್ಲಿ ಮುಳುಗಿದ ಕಾಂಗ್ರೆಸ್ ಸರಕಾರಕ್ಕೆ ತಕ್ಕ ಪಾಠ ಕಲಿಸುವ ನಿರ್ಧಾರಕ್ಕೆ ರಾಜ್ಯದ ಜನತೆ ಬಂದಿದ್ದಾರೆ ಎಂದು ತಿಳಿಸಿದರು.



Join Whatsapp