ಮೃತಪಟ್ಟ ಜಾನುವಾರುಗಳನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದ ಟೋಯಿಂಗ್ ಸಿಬ್ಬಂದಿ

Prasthutha|

ಭಟ್ಕಳ: ಮೃತಪಟ್ಟಿದ್ದ ಎರಡು ಗೋವುಗಳನ್ನು ಐಆರ್ ಬಿ ಕಂಪೆನಿಯ ಟೋಯಿಂಗ್ ವಾಹನಕ್ಕೆ ಹಗ್ಗಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋದ ಅಮಾನವೀಯ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಇದರ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.

- Advertisement -


ಭಟ್ಕಳದ ಬೆಳಕೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತದಿಂದ ಎರಡು ಜಾನುವಾರುಗಳು ಮೃತಪಟ್ಟಿದ್ದವು. ಜಾನುವಾರುಗಳನ್ನು ಐಆರ್ ಬಿ ಟೋಯಿಂಗ್ (1033) ವಾಹನಕ್ಕೆ ಕಟ್ಟಿ ಎಳೆದೊಯ್ಯುತ್ತಿದ್ದುದನ್ನು ವಾಹನದ ಹಿಂಬದಿಯಿಂದ ಸಂಚರಿಸುತ್ತಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Join Whatsapp