Home ಟಾಪ್ ಸುದ್ದಿಗಳು ಮೃತಪಟ್ಟ ಜಾನುವಾರುಗಳನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದ ಟೋಯಿಂಗ್ ಸಿಬ್ಬಂದಿ

ಮೃತಪಟ್ಟ ಜಾನುವಾರುಗಳನ್ನು ವಾಹನಕ್ಕೆ ಕಟ್ಟಿ ಎಳೆದೊಯ್ದ ಟೋಯಿಂಗ್ ಸಿಬ್ಬಂದಿ

ಭಟ್ಕಳ: ಮೃತಪಟ್ಟಿದ್ದ ಎರಡು ಗೋವುಗಳನ್ನು ಐಆರ್ ಬಿ ಕಂಪೆನಿಯ ಟೋಯಿಂಗ್ ವಾಹನಕ್ಕೆ ಹಗ್ಗಕಟ್ಟಿ ರಸ್ತೆಯಲ್ಲಿ ಎಳೆದುಕೊಂಡು ಹೋದ ಅಮಾನವೀಯ ಘಟನೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಇದರ ವೀಡಿಯೋ ವೈರಲ್ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.


ಭಟ್ಕಳದ ಬೆಳಕೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಅಪಘಾತದಿಂದ ಎರಡು ಜಾನುವಾರುಗಳು ಮೃತಪಟ್ಟಿದ್ದವು. ಜಾನುವಾರುಗಳನ್ನು ಐಆರ್ ಬಿ ಟೋಯಿಂಗ್ (1033) ವಾಹನಕ್ಕೆ ಕಟ್ಟಿ ಎಳೆದೊಯ್ಯುತ್ತಿದ್ದುದನ್ನು ವಾಹನದ ಹಿಂಬದಿಯಿಂದ ಸಂಚರಿಸುತ್ತಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್ ನಲ್ಲಿ ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

Join Whatsapp
Exit mobile version