Home ಟಾಪ್ ಸುದ್ದಿಗಳು ಸಾರಿಗೆ ನೌಕರರ ಮುಷ್ಕರ ನಾಳೆಯೂ ಮುಂದುವರೆಯಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಸಾರಿಗೆ ನೌಕರರ ಮುಷ್ಕರ ನಾಳೆಯೂ ಮುಂದುವರೆಯಲಿದೆ : ಕೋಡಿಹಳ್ಳಿ ಚಂದ್ರಶೇಖರ್

ಬೆಂಗಳೂರು: ಸರ್ಕಾರವು ಸಾರಿಗೆ ನೌಕರರ ಬೇಡಿಕೆಯನ್ನು ಈಡೇರಿಸದ ಹಿನ್ನೆಲೆಯಲ್ಲಿ ನಾಳೆಯೂ ಪ್ರತಿಭಟನೆ ಮುಂದುವರೆಯಲಿದೆ ಎಂದು ಸಾರಿಗೆ ನೌಕರರ ಒಕ್ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌ ಹೇಳಿದ್ದಾರೆ.

ಈ ಕುರಿತು, ಸಾರಿಗೆ ನೌಕಕರಿಗೆ ಅತ್ಯಂತ ಕಡಿಮೆ ಸಂಬಳ ನೀಡಲಾಗುತ್ತಿದೆ. ಇಷ್ಟು ಕಡಿಮೆ ಸಂಬಳ ಯಾವ ಸರ್ಕಾರಿ ನೌಕರರಿಗೂ ನೀಡುವುದಿಲ್ಲ. ಈ ತಾರತಾಮ್ಯ ನೀತಿ ಸರಿಯಲ್ಲ. ನೀವು ಕೇವಲ ಮನೆಯಲ್ಲಿ ಕುಳಿತು ಶೇ. 8ರಷ್ಟು ಸಂಬಳ ಜಾಸ್ತಿ ಮಾಡುತ್ತೇವೆ ಎಂದು ಹೇಳುತ್ತೀರಿ. ಕೊಟ್ಟ ಮಾತಿನಂತೆ ಸರ್ಕಾರ ನಡೆದುಕೊಳ್ಳಬೇಕು ಎಂದು ಮಾಧ್ಯಮಗಳೊಂದಿಗೆ ಮಾತನಾಡಿದ ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೆಲಸಕ್ಕೆ ಹಾಜರಾಗದಿದ್ರೆ ಕಠಿಣ ಕ್ರಮ ಕೈಗೊಳ್ಳುವುದಾಗಿ ಸಾರಿಗೆ ಸಿಬ್ಬಂದಿಗಳ ಮನೆ ಬಾಗಿಲಿಗೆ ನೋಟಿಸ್‌ ಕಳುಹಿಸಿದ ಸರಕಾರದ ಕ್ರಮವನ್ನು “ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಇದು ಸರಿಯಾದ ಕ್ರಮವಲ್ಲ” ಎಂದು ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

Join Whatsapp
Exit mobile version