ಸಾರಿಗೆ ನೌಕರರ ಮುಷ್ಕರ | ಚಾಲಕ ಆತ್ಮಹತ್ಯೆ

Prasthutha|


ಬೆಳಗಾವಿ : ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವ ಸಂದರ್ಭದಲ್ಲೇ ಚಾಲಕರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ ಜಿಲ್ಲೆಯ ಸವದತ್ತಿಯಲ್ಲಿ ನಡೆದಿದೆ.
ಶಿವಕುಮಾರ ನೀಲಗಾರ (40) ಮೃತಪಟ್ಟ ಸಾರಿಗೆ ನೌಕರ. ಅವರು ಜಿಲ್ಲೆಯ ಸವದತ್ತಿ ಘಟಕದಲ್ಲಿ ಚಾಲಕ ಕಂ ನಿರ್ವಾಹಕರಾಗಿ ಕೆಲಸ ಮಾಡುತ್ತಿದ್ದರು.

- Advertisement -


ಕರ್ತವ್ಯಕ್ಕೆ ಹಾಜರಾಗುವಂತೆ ಅಧಿಕಾರಿಗಳು ಕಿರುಕುಳ ನೀಡುತ್ತಿದ್ದರು. ಇದರಿಂದ ನೀಲಗಾರ ಅವರು ಮನೆಯಲ್ಲೇ ಆತ್ಮಹತ್ಯೆ ಶರಣಾಗಿದ್ದಾರೆ ಎಂಬ ಆರೋಪ ಕೂಡ ಕೇಳಿಬಂದಿದೆ.
ಕೆಲಸಕ್ಕೆ ಹಾಜರಾಗದಿದ್ದರೆ ಕೆಲಸದಿಂದ ವಜಾ ಮಾಡುವುದಾಗಿ ಶಿವಕುಮಾರ್ ಅವರಿಗೆ ಅಧಿಕಾರಿಗಳು ಬೆದರಿಸಿದ್ದರು ಎನ್ನಲಾಗಿದೆ.
ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Join Whatsapp