Home ಟಾಪ್ ಸುದ್ದಿಗಳು ಆದಿವಾಸಿಗೆ ಗುಂಡೇಟು| ತನಿಖೆಗೆ ನಟ ಚೇತನ್ ಆಗ್ರಹ

ಆದಿವಾಸಿಗೆ ಗುಂಡೇಟು| ತನಿಖೆಗೆ ನಟ ಚೇತನ್ ಆಗ್ರಹ

ಮೈಸೂರು: ಆದಿವಾಸಿ ವ್ಯಕ್ತಿಯೊಬ್ಬರಿಗೆ ಕ್ಷುಲ್ಲಕ ಕಾರಣಕ್ಕೆ ಅರಣ್ಯ ಸಿಬ್ಬಂದಿ ಬಂದೂಕಿನಿಂದ ಗುಂಡಿಕ್ಕಿ ಗಾಯಗೊಳಿಸಿರುವ ಘಟನೆಗೆ ಸಂಬಂಧಿಸಿ ನಟ ಚೇತನ್ ಸೂಕ್ತ ತನಿಖೆಗೆ ಆಗ್ರಹಿಸಿದ್ದಾರೆ.


ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಬಳಿಯ ರಾಣಿಗೇಟ್ ಜೇನುಕುರುಬರ ಹಾಡಿಯಲ್ಲಿ ಆದಿವಾಸಿ ವ್ಯಕ್ತಿಯೊಬ್ಬರಿಗೆ ಕ್ಷುಲ್ಲಕ ಕಾರಣಕ್ಕೆ ಅರಣ್ಯ ಸಿಬ್ಬಂದಿ ಬಂದೂಕಿನಿಂದ ಗುಂಡಿಕ್ಕಿ ಗಾಯಗೊಳಿಸಿದ್ದಾನೆ.
ಗಾಯಗೊಂಡ ಆದಿವಾಸಿ ಯುವಕ ಬಸವ ಎಂಬಾತ ಕೆ.ಆರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಆದಿವಾಸಿ ಯುವಕನಿಗೆ ಅರಣ್ಯ ಇಲಾಖೆಯ ವಾಚ್’ಮನ್ ಸುಬ್ರಮಣಿ ಹಾಗೂ ಇತರ ಮೂವರು ಬಂದೂಕಿನಿಂದ ಗುಂಡು ಹಾರಿಸಿ ಕೊಲೆಗೈಯಲು ಯತ್ನಿಸಿರುವುದಾಗಿ ಸಂತ್ರಸ್ತರ ಪತ್ನಿ ಪುಷ್ಪಾ ಪೊಲೀಸ್ ದೂರಿನಲ್ಲಿ ಆರೋಪಿಸಿದ್ದಾರೆ. ಈ ನಡುವೆ ಬಸವ ಮತ್ತು ಆತನ ಸಹಚರರು ಗಂಧದ ಕಟ್ಟಿಗೆ ಸಾಗಿಸುತ್ತಿದ್ದರೆಂದು ಆರೋಪಿಸಿ ಅರಣ್ಯ ಇಲಾಖೆಯ ಸಿಬ್ಬಂದಿ ಕೂಡಾ ಪೊಲೀಸ್ ದೂರು ನೀಡಿದ್ದಾರೆ.

ಆದಿವಾಸಿ ಸಮಯದಾಯದ ಏಳಿಗೆ, ಸಮಾಜ ಸೇವೆ, ದಲಿತ ಪರ, ಕನ್ನಡ ಪರ ಹೋರಾಟಗಳಲ್ಲಿ ತೊಡಗಿಕೊಂಡಿರುವ ಚೇತನ್ ಅಹಿಂಸಾ ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಿಸುವಂತೆ ಆಗ್ರಹಿಸಿದ್ದಾರೆ.

Join Whatsapp
Exit mobile version