ಟಿಎಂಸಿ ನಾಯಕಿಯ ಬಂಧನದ ವೇಳೆ ಬಿಜೆಪಿ ಕಾರ್ಯಕರ್ತರಿಂದ ಹಲ್ಲೆ: ತೃಣಮೂಲ ಕಾಂಗ್ರೆಸ್ ಆರೋಪ

Prasthutha|

ಕೋಲ್ಕತ್ತಾ: ಬಿಜೆಪಿ ಆಡಳಿತವಿರುವ ತ್ರಿಪುರಾದಲ್ಲಿ ತೃಣಮೂಲ ಕಾಂಗ್ರೆಸ್ ನ ಮುಖಂಡೆ, ನಟಿ ಸಯೋನಿ ಘೋಷ್ ಅವರನ್ನು ಕೊಲೆಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾನುವಾರ ಪೊಲೀಸರು ಬಂಧಿಸಿದ್ದು, ಈ ವೇಳೆ ಬಿಜೆಪಿ ಕಾರ್ಯಕರ್ತರು ಆಕೆಯ ಮೇಲೆ ದಾಳಿ ನಡೆಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ.

- Advertisement -

ತ್ರಿಪುರಾದಲ್ಲಿ ಪುನರಾವರ್ತನೆಯಾಗುತ್ತಿರುವ ಹಿಂಸಾಚಾರದ ನಿದರ್ಶನಗಳ ಕುರಿತು ಗೃಹ ಸಚಿವ ಅಮಿತ್ ಶಾ ಅವರೊಂದಿಗೆ ಚರ್ಚಿಸಲು ಟಿಎಂಸಿ ನಿಯೋಗ ದೆಹಲಿಗೆ ಪ್ರಯಾಣಿಸಲು ನಿರ್ಧರಿಸಿದ ಬೆನ್ನಲ್ಲೇ ಈ ಘಟನೆ ನಡೆದಿರುವುದು ವಿಷಾದನೀಯ ಎಂದು ಟಿಎಂಸಿ ಬಣ್ಣಿಸಿದೆ.

ಟಿಎಂಸಿ ಯುವ ವಿಭಾಗದ ಮುಖ್ಯಸ್ಥೆ ಸಂಯೋನಿ ಘೋಷ್ ಅವರನ್ನು ತ್ರಿಪುರಾ ಪೊಲೀಸರು ಭಾನುವಾರ ಬಂಧಿಸಿದ್ದರು. ಈ ವೇಳೆ ಆಕೆಯನ್ನು ವಿಚಾರಣೆಗೆಂದು ಅಗರ್ತಲಾ ಪೊಲೀಸ್ ಠಾಣೆಗೆ ಕರೆದೊಯ್ಯುತ್ತಿದ್ದಾಗ ಬಿಜೆಪಿ ಕಾರ್ಯಕರ್ತರು ಗಂಭೀರವಾಗಿ ಹಲ್ಲೆ ನಡೆಸಿದ್ದಾರೆ ಎಂದು ಟಿಎಂಸಿ ಆರೋಪಿಸಿದೆ. ಈ ಸಂದರ್ಭದಲ್ಲಿ ಪಕ್ಷದ ಆರು ಮಂದಿ ನಾಯಕರಿಗೆ ಗಂಭೀರ ಸ್ವರೂಪದ ಗಾಯಗಳಾಗಿದೆ ಎಂದು ಅದು ಹೇಳಿದೆ.

Join Whatsapp