TRP ಹಗರಣ | ‘ರಿಪಬ್ಲಿಕ್ ಟಿವಿ’ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಮಹತ್ವದ ಸಾಕ್ಷಿ ಪತ್ತೆ ಹಚ್ಚಿದ ಪೊಲೀಸರು

Prasthutha|

ಮುಂಬೈ : ಟೆಲಿವಿಷನ್ ರೇಟಿಂಗ್ ಪಾಯಿಂಟ್ಸ್ (ಟಿಆರ್ ಪಿ) ಹಗರಣಕ್ಕೆ ಸಂಬಂಧಿಸಿದಂತೆ ರಿಪಬ್ಲಿಕ್ ಟಿವಿ ಮತ್ತು ಅದರ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ವಿರುದ್ಧ ಸಾಕ್ಷ್ಯಗಳು ಪತ್ತೆಯಾಗಿವೆ ಎಂದು ಮುಂಬೈ ಪೊಲೀಸರು ಬಾಂಬೆ ಹೈಕೋರ್ಟ್ ಗೆ ಮಾಹಿತಿ ನೀಡಿದ್ದಾರೆ.

- Advertisement -

ಯಾವುದೇ ಬಲವಂತದ ಕ್ರಮದಿಂದ ಗೋಸ್ವಾಮಿಗೆ ರಕ್ಷಣೆ ನೀಡುವುದನ್ನು ಮುಂದುವರಿಸಬಾರದು ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. ಆದರೆ, ಹೈಕೋರ್ಟ್ ಈ ವಿಷಯದ ವಿಚಾರಣೆಯನ್ನು ಮುಂದೂಡಿದೆ.

ಟಿವಿ ವಾಹಿನಿಗಳು ತಮ್ಮ ಜಾಹೀರಾತು ಆದಾಯ ಹೆಚ್ಚಿಸಿಕೊಳ್ಳಲು ಟಿಆರ್ ಪಿ ಸಂಖ್ಯೆಯನ್ನು ಅಡ್ಡದಾರಿಯಲ್ಲಿ ಹೆಚ್ಚಿಸಿಕೊಳ್ಳುತ್ತಿವೆ ಎಂದು ಬಾರ್ಕ್ ದೂರು ನೀಡಿತ್ತು. ಈ ಆಧಾರದಲ್ಲಿ ತನಿಖೆ ನಡೆಸಿರುವ ಪೊಲೀಸರು, ಟಿಆರ್ ಪಿ ಹಗರಣವನ್ನು ಪತ್ತೆ ಹಚ್ಚಿದ್ದಾರೆ.   

Join Whatsapp