ಶಿರಾಡಿ ಘಾಟ್’ನಲ್ಲಿ ಬೆಂಕಿಗಾಹುತಿಯಾದ ಲಾರಿ..!

Prasthutha|

ನೆಲ್ಯಾಡಿ: ಲಾರಿಯೊಂದು ಬೆಂಕಿಗಾಹುತಿಯಾದ ಘಟನೆ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯ ಡಬಲ್ ಟರ್ನ್ ಬಳಿ ಇಂದು ಬೆಳಿಗ್ಗೆ ನಡೆದಿದೆ.

- Advertisement -


ಮಂಗಳೂರಿನಿಂದ ಬೆಂಗಳೂರು ಕಡೆಗೆ ಸಂಚರಿಸುತ್ತಿದ್ದ ಈಚರ್ ಲಾರಿಯಲ್ಲಿ ಶಿರಾಡಿ ಘಾಟಿಯ ಡಬಲ್ ಟರ್ನ್ ಬಳಿ ತಲುಪುತ್ತಿದ್ದಂತೆ ಹೊಗೆ ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ.

ಚಾಲಕ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಿ ಕೆಳಕ್ಕಿಳಿದಿದ್ದಾರೆ. ಬಳಿಕ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟುಹೋಗಿದೆ ಎಂದು ವರದಿಯಾಗಿದೆ.



Join Whatsapp