ಪುಂಜಾಲಕಟ್ಟೆಯಲ್ಲಿ ಲಾರಿ – ಪಿಕಪ್ ನಡುನಡುವೆ ಭೀಕರ ಅಪಘಾತ: ಚಾಲಕ ಮೃತ್ಯು

Prasthutha|

ಪುಂಜಾಲಕಟ್ಟೆ : ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ – ಪಿಕಪ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಪಿಕಪ್ ಚಾಲಕ ಮೃತಪಟ್ಟಿದ್ದು, ಇಬ್ಬರು ಗಂಭೀರ ಗಾಯಗೊಂಡಿದ್ದಾರೆ.

- Advertisement -

ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ನಿವಾಸಿ ಸಹಲ್ (19) ಎಂದು ಗುರುತಿಸಲಾಗಿದೆ.

ಸಹಲ್ ಜೊತೆಯಿದ್ದ ಸ್ನೇಹಿತ ಅವಿನಾಶ್ (19), ಲಾರಿ ಚಾಲಕ ಧನರಾಜ್ (22) ಗಂಭೀರ ಗಾಯಗೊಂಡಿದ್ದಾರೆ. ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

- Advertisement -

ಪಿಕಪ್ ಚಾಲಕ ಸಹಲ್ ರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ಚಾಲಕನ ತಲೆಯ ಭಾಗಕ್ಕೆ ಬಲವಾದ ಹೊಡೆತ ಬಿದ್ದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಂಜೆ 6:30 ರ ಹೊತ್ತಿನಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಮೃತ ವ್ಯಕ್ತಿಯನ್ನು ಬಂಟ್ವಾಳ ತಾಲೂಕಿನ ಪಾಂಡವರಕಲ್ಲು ನಿವಾಸಿ ಸಹಲ್ (19) ಎಂದು ಗುರುತಿಸಲಾಗಿದೆ.

ಸಹಲ್ ಜೊತೆಯಿದ್ದ ಸ್ನೇಹಿತ ಅವಿನಾಶ್ (19), ಲಾರಿ ಚಾಲಕ ಧನರಾಜ್ (22) ಗಂಭೀರ ಗಾಯಗೊಂಡಿದ್ದಾರೆ. ಇವರು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರಿನಿಂದ ಧರ್ಮಸ್ಥಳ ಕಡೆಗೆ ಚಲಿಸುತ್ತಿದ್ದ ಲಾರಿಯು, ಪುಂಜಾಲಕಟ್ಟೆಯಿಂದ ವಗ್ಗ ಕಡೆಗೆ ಹೋಗುವ ಪಿಕಪ್ ವಾಹನಕ್ಕೆ ರಭಸದಿಂದ ಡಿಕ್ಕಿ ಹೊಡೆದಿದೆ. ಹೊಡೆತದ ಪರಿಣಾಮ ಪಿಕಪ್ ವಾಹನದ ಮುಂಭಾಗ ಜಖಂ ಆಗಿದೆ.

Join Whatsapp