‘ಸತ್ಯವೇ ನನ್ನ ಅಸ್ತ್ರ’ – ಜಾಮೀನು ಬಳಿಕ ರಾಹುಲ್ ಟ್ವಿಟ್

Prasthutha|

ನವದೆಹಲಿ: ‘ಸತ್ಯವೇ ನನ್ನ ಆಯುಧ’ ಎಂದು ಗುಜರಾತ್’ನ ಸೆಷನ್ಸ್ ನ್ಯಾಯಾಲಯದಿಂದ ಜಾಮೀನು ಪಡೆದ ಬಳಿಕ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಈ ಕುರಿತು ಟ್ವೀಟ್ ಮಾಡಿರುವ ಅವರು, “ಮಿತ್ರಕಾಲದ ವಿರುದ್ಧ ಪ್ರಜಾಪ್ರಭುತ್ವ ಉಳಿಸುವ ಹೋರಾಟ ಇದಾಗಿದೆ. ಈ ಹೋರಾಟದಲ್ಲಿ ಸತ್ಯವೇ ನನ್ನ ಅಸ್ತ್ರ, ಸತ್ಯವೇ ನನ್ನ ಆಸರೆ” ಎಂದು ಬರೆದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಮಾನನಷ್ಟ ಪ್ರಕರಣದಲ್ಲಿ ರಾಹುಲ್ ಗಾಂಧಿ ಅವರಿಗೆ ಸೂರತ್‌ನ ಸೆಷನ್ಸ್ ನ್ಯಾಯಾಲಯ ಸೋಮವಾರ ಎಪ್ರಿಲ್ 13 ರವರೆಗೆ ಜಾಮೀನು ವಿಸ್ತರಿಸಿದೆ.

Join Whatsapp