ವಾಲ್ಮೀಕಿ ನಿಗಮದಲ್ಲಿ ಅಕ್ರಮ | ತನಿಖೆ ಬಳಿಕ ಸತ್ಯ ಹೊರ ಬರಲಿದೆ: ಸಚಿವ ಮಹದೇವಪ್ಪ

Prasthutha|

ಬೆಂಗಳೂರು: ವಾಲ್ಮೀಕಿ ಪರಿಶಿಷ್ಟ ಪಂಡಗಳ ಅಭಿವೃದ್ಧಿ ನಿಗಮದ ಅಧಿಕಾರಿ ಚಂದ್ರಶೇಖರ್ ಅವರ ಆತ್ಮಹತ್ಯೆಯಿಂದ ತುಂಬ ನೋವಾಗಿದೆ. ಮರಣಪತ್ರದಲ್ಲಿ ಅವರು ಕೆಲವು ಆರೋಪಗಳನ್ನು ಮಾಡಿದ್ದಾರೆ.

- Advertisement -

ತಕ್ಷಣವೆ ಸರ್ಕಾರ ತನಿಖೆ ಆರಂಭಿಸಿದೆ. ಎಲ್ಲ ಆಯಾಮಗಳಲ್ಲಿ ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಸತ್ಯಾಸತ್ಯತೆ ಹೊರಗಡೆ ಬರಲಿದೆ’ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇಲ್ಲಿ ದಲಿತರು, ದಲಿತೇತರ ಹಣ ಎಂದಲ್ಲ. ಅದು ಸರ್ಕಾರದ ಹಣ. ಅಂತೆ ಕಂತೆಗಳ ಮೇಲೆ ಮಾತನಾಡಲು ಆಗುವುದಿಲ್ಲ. ಪ್ರಕರಣವನ್ನು ರಾಜಕೀಯಕರಣಗೊಳಿಸಿದ ತಕ್ಷಣ ಮಾತನಾಡಲು ಆಗುವುದಿಲ್ಲ. ಕೆ.ಎಸ್. ಈಶ್ವರಪ್ಪ ಪ್ರಕರಣವೇ ಬೇರೆ, ನಿಗಮದ ಹಣ ವರ್ಗಾವಣೆ ಪ್ರಕರಣವೇ ಬೇರೆ. ಅದಕ್ಕೂ ಇದಕ್ಕೂ ಹೋಲಿಕೆ ಸರಿಯಲ್ಲ’ ಎಂದು ಅಭಿಪ್ರಾಯಪಟ್ಟರು.



Join Whatsapp