Home ಟಾಪ್ ಸುದ್ದಿಗಳು ಸತ್ಯ ಆದಷ್ಟು ಬೇಗ ಹೊರಬರಲಿದೆ: ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಸತ್ಯ ಆದಷ್ಟು ಬೇಗ ಹೊರಬರಲಿದೆ: ವಿಚಾರಣೆಗೆ ಕಾಲಾವಕಾಶ ಕೋರಿದ ಪ್ರಜ್ವಲ್ ರೇವಣ್ಣ

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದ ವಿಚಾರಣೆಗೆ ಹಾಜರಾಗಲು 7 ದಿನಗಳ ಕಾಲಾವಕಾಶ ನೀಡುವಂತೆ ಕೋರಿ ಆರೋಪಿ ಪ್ರಜ್ವಲ್ ರೇವಣ್ಣ ಅವರ ಪರವಾಗಿ ವಕೀಲ ಅರುಣ್ ಜಿ. ಅವರು ಎಸ್ ಐಟಿ ಅಧಿಕಾರಿಗಳಿಗೆ ಪತ್ರ ಬರೆದಿದ್ದಾರೆ.


ವಿಚಾರಣೆಗೆ ಹಾಜರಾಗುವಂತೆ ಸೂಚಿಸಿ ಅಧಿಕಾರಿಗಳು ನೀಡಿರುವ ನೋಟಿಸ್‌ಗೆ ಉತ್ತರ ನೀಡಿರುವ ವಕೀಲ ಅರುಣ್, ‘ನನ್ನ ಕಕ್ಷಿದಾರ ಪ್ರಜ್ವಲ್ ರೇವಣ್ಣ ಅವರು ಸದ್ಯ ಪ್ರವಾಸದಲ್ಲಿದ್ದಾರೆ. 7 ದಿನ ಕಾಲಾವಕಾಶ ನೀಡಿ. ನಂತರ, ಮತ್ತೊಂದು ದಿನಾಂಕ ನೀಡಿ. ಅಂದು ಅವರು ವಿಚಾರಣೆಗೆ ಹಾಜರಾಗುತ್ತಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದಾರೆ.


ವಿಡಿಯೋ ವೈರಲ್ ಹಾಗೂ ಪ್ರಕರಣ ದಾಖಲಾದ ಬಳಿಕ ಪ್ರಜ್ವಲ್ ರೇವಣ್ಣ ಆವರದ್ದು ಇದು ಮೊದಲ ಪ್ರತಿಕ್ರಿಯೆಯಾಗಿದೆ.

Join Whatsapp
Exit mobile version