ಸತ್ಯಕ್ಕೆ ಗೆಲುವು ಸಿಕ್ಕೇ ಸಿಗುತ್ತದೆ: ಕೋರ್ಟ್ ಆದೇಶದ ಬಳಿಕ ರಾಹುಲ್ ಮೊದಲ ಪ್ರತಿಕ್ರಿಯೆ

Prasthutha|

ದೆಹಲಿ: ಸತ್ಯ ಗೆಲ್ಲುತ್ತದೆ, ನನ್ನ ಹಾದಿ ಬಗ್ಗೆ ಸ್ಪಷ್ಟವಾಗಿ ತಿಳಿದಿದೆ. ನಮ್ಮ ಜೊತೆ ನಿಂತ ಎಲ್ಲರಿಗೂ ನಾನು ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

- Advertisement -

ಮೋದಿ ಉಪನಾಮ ಟೀಕೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಸುಪ್ರೀಂಕೋರ್ಟ್ ಮಧ್ಯಂತರ ತಡೆ ನೀಡಿದ ನಂತರ ರಾಹುಲ್ ಇಂದು(ಶುಕ್ರವಾರ) ಮಾಧ್ಯಮದವರನ್ನುದ್ದೇಶಿಸಿ ಮಾತನಾಡಿದ್ದಾರೆ.


“ಆಜ್ ನಹೀ ತೋಹ್ ಕಲ್, ಕಲ್ ನಹೀ ತೋ ಪರ್ಸೋ ಸಚ್ ಕಿ ಜೀತ್ ಹೋತಿ ಹೈ ( ಇವತ್ತು ಅಲ್ಲದಿದ್ದರೆ ನಾಳೆ, ನಾಳೆ ಅಥವಾ ನಾಡಿದ್ದು ಸತ್ಯ ಗೆದ್ದೇ ಗೆಲ್ಲುತ್ತದೆ). ನನ್ನ ಹಾದಿ ಸ್ಪಷ್ಟವಾಗಿದೆ. ನಾನು ಏನು ಮಾಡಬೇಕು ಮತ್ತು ನನ್ನ ಕೆಲಸ ಏನು ಎಂದು ನನ್ನ ಮನಸ್ಸಿನಲ್ಲಿ ಸ್ಪಷ್ಟತೆ ಇದೆ. ನಮಗೆ ಸಹಾಯ ಮಾಡಿದ ಜನರಿಗೆ ನಾನು ಧನ್ಯವಾದಗಳು . ಜನರ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಸಹ ಧನ್ಯವಾದ ಹೇಳುತ್ತೇನೆ ಎಂದಿದ್ದಾರೆ.



Join Whatsapp