ತುಳು, ದೈವ–ದೇವರುಗಳು ಮಾತಾಡುವಂತಹ ಭಾಷೆ ಎಂದ ಯು.ಟಿ.ಖಾದರ್

Prasthutha|

ಬೆಂಗಳೂರು: ತುಳು ಭಾಷೆ, ದೈವ–ದೇವರುಗಳು ಮಾತಾಡುವಂತಹ ಭಾಷೆಯಾಗಿದ್ದು, ಇದನ್ನು ಎರಡನೇ ರಾಜ್ಯಭಾಷೆಯಾಗಿ ಘೋಷಿಸಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ಉಪ ನಾಯಕ ಯು.ಟಿ.ಖಾದರ್ ಆಗ್ರಹಿಸಿದ ಪ್ರಸಂಗ ವಿಧಾನಸಭಾ ಕಲಾಪದಲ್ಲಿಂದು ನಡೆಯಿತು.

- Advertisement -

  ತುಳು ಭಾಷೆಗೆ ಅದರದೇ ಆದಂತಹ ಇತಿಹಾಸವಿದೆ ಮತ್ತು ಸಂಸ್ಕೃತಿ ಇದೆ. ತುಳು ದೈವ–ದೇವರುಗಳು ಮಾತಾಡುವಂತಹ ಭಾಷೆ ತುಳು, ಹಾಗಾಗಿ ಈ ಭಾಷೆಯನ್ನು ಎರಡನೇ ರಾಜ್ಯಭಾಷೆಯನ್ನಾಗಿ ಘೊಷಿಸಬೇಕು ಎಂದು ಖಾದರ್ ಆಗ್ರಹಿಸಿದರು.

ಆಗ ಮಧ್ಯಪ್ರವೇಶಿಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಇವರ ಜಿಲ್ಲೆಗಳಲ್ಲಿ ದೇವರು ಮಾತನಾಡುತ್ತವೆ,  ದೇವರು ತುಳುವಿನಲ್ಲಿ ಮಾತಾಡ್ತಾರಾ ಎಂದು ವ್ಯಂಗ್ಯವಾಡಿದರು.



Join Whatsapp