ತುಮಕೂರು: ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯ ರಕ್ಷಣೆ

Prasthutha|

ತುಮಕೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೆರೆಕೋಡಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯನ್ನು ರಕ್ಷಿಸಲಾಗಿದೆ.

- Advertisement -


ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಹಂಸಾ (19) ತುಮಕೂರು ಜಿಲ್ಲೆಯ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಕೊಚ್ಚಿ ಹೋಗಿದ್ದಳು.


ಸತತ 12 ಗಂಟೆಗಳ ಕಾರ್ಯಾಚರಣೆ ಮೂಲಕ ಅಗ್ನಿ ಶಾಮಕ ದಳದವರು ಯುವತಿಯನ್ನು ರಕ್ಷಣೆ ಮಾಡಿದ್ದಾರೆ.

- Advertisement -


ಕಲ್ಲುಬಂಡೆಯ ಗುಹೆಯೊಳಗೆ ಯುವತಿ ಹಂಸಾ ಸಿಲುಕಿಕೊಂಡಿದ್ದಳು. ಅದೃಷ್ಟವಶಾತ್ ಆ ಭಾಗದಲ್ಲಿ ಮುಂಡಿಯುದ್ದಕ್ಕಷ್ಟೇ ನೀರಿತ್ತು. ಹಾಗಾಗಿ ಹಂಸಾಳಿಗೆ ತೊಂದರೆಯಾಗಿಲ್ಲ. ರಕ್ಷಣೆ ಮಾಡಿದ ಬಳಿಕ ಹಂಸಾಳನ್ನು ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ




Join Whatsapp