Home Uncategorized ತುಮಕೂರು: ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯ ರಕ್ಷಣೆ

ತುಮಕೂರು: ಸೆಲ್ಫಿ ತೆಗೆಯಲು ಹೋಗಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯ ರಕ್ಷಣೆ

ತುಮಕೂರು: ಸೆಲ್ಫಿ ತೆಗೆದುಕೊಳ್ಳಲು ಹೋಗಿ ಕೆರೆಕೋಡಿ ನೀರಿನಲ್ಲಿ ಕೊಚ್ಚಿಹೋಗಿದ್ದ ಯುವತಿಯನ್ನು ರಕ್ಷಿಸಲಾಗಿದೆ.


ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಶಿವರಾಂಪುರ ಗ್ರಾಮದ ಹಂಸಾ (19) ತುಮಕೂರು ಜಿಲ್ಲೆಯ ಮೈದಾಳ ಕೆರೆಯ ಕೋಡಿ ನೀರಿನಲ್ಲಿ ಭಾನುವಾರ ಕೊಚ್ಚಿ ಹೋಗಿದ್ದಳು.


ಸತತ 12 ಗಂಟೆಗಳ ಕಾರ್ಯಾಚರಣೆ ಮೂಲಕ ಅಗ್ನಿ ಶಾಮಕ ದಳದವರು ಯುವತಿಯನ್ನು ರಕ್ಷಣೆ ಮಾಡಿದ್ದಾರೆ.


ಕಲ್ಲುಬಂಡೆಯ ಗುಹೆಯೊಳಗೆ ಯುವತಿ ಹಂಸಾ ಸಿಲುಕಿಕೊಂಡಿದ್ದಳು. ಅದೃಷ್ಟವಶಾತ್ ಆ ಭಾಗದಲ್ಲಿ ಮುಂಡಿಯುದ್ದಕ್ಕಷ್ಟೇ ನೀರಿತ್ತು. ಹಾಗಾಗಿ ಹಂಸಾಳಿಗೆ ತೊಂದರೆಯಾಗಿಲ್ಲ. ರಕ್ಷಣೆ ಮಾಡಿದ ಬಳಿಕ ಹಂಸಾಳನ್ನು ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

Join Whatsapp
Exit mobile version