ತುಮಕೂರು: ಬೇಕರಿಯಲ್ಲಿ ಆಕಸ್ಮಿಕ ಬೆಂಕಿ

Prasthutha|

ತುಮಕೂರು: ಬೇಕರಿಯೊಂದಕ್ಕೆ ಬೆಂಕಿ ಹೊತ್ತಿಕೊಂಡು ಅಪಾರ ಪ್ರಮಾಣದ ನಾಶ-ನಷ್ಟವುಂಟಾಗಿರುವ ಘಟನೆ ನಾಗವಲ್ಲಿಯ ಎಂ.ಜಿ ರಸ್ತೆಯಲ್ಲಿ ನಡೆದಿದೆ.

- Advertisement -


ಹಾಸನ ಮೂಲದ ಅಭಿಷೇಕ್ ಎಂಬವರ ಒಡೆತನದ ಬೇಕರಿ ಇದಾಗಿದ್ದು, ಬೆಂಕಿ ಕಾಣಿಸಿಕೊಂಡ ಕೂಡಲೇ ಸ್ಥಳೀಯರು ಸೇರಿ ನಂದಿಸಿದ್ದಾರೆ ಎನ್ನಲಾಗಿದ್ದು, ಅಗ್ನಿಶಾಮಕ ದಳದ ವಾಹನ ಬರುವ ಹೊತ್ತಿಗೆ ಸುಮಾರು 12 ಲಕ್ಷ ರೂ, ಮೌಲ್ಯದ ಸೊತ್ತುಗಳು ಹಾನಿಗೀಡಾಗಿವೆ. ಬೇಕರಿಯ ಒಳಗಿದ್ದ ಗ್ಯಾಸ್ ಸಿಲಿಂಡರನ್ನು ಸಾರ್ವಜನಿಕರು ಹೊರ ತೆಗೆದಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.



Join Whatsapp