ತುಮಕೂರು | ರಸ್ತೆ ಅಪಘಾತ: 6 ಮಂದಿ ಸಾವು

Prasthutha|

ತುಮಕೂರು: ಮಧುಗಿರಿ ತಾಲೂಕಿನ ಕೆರೆಗಳಪಾಳ್ಯ ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿ 6 ಜನ ಮೃತಪಟ್ಟಿದ್ದಾರೆ.

- Advertisement -

ಅಪಘಾತ ನಡೆದ ಸ್ಥಳಕ್ಕೆ ಎಡಿಜಿಪಿ ಅಲೋಕ್​ ಕುಮಾರ್ ಹಾಗೂ ಕೇಂದ್ರ ವಲಯ ಐಜಿಪಿ ಲಾಬೂರಾಮ್​ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಘಾತ ಸಂಬಂಧ ಮಾತನಾಡಿದ ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್, ಕೊರಟಗೆರೆ ಕಡೆಗೆ ಮಾರುತಿ ಸಿಯಾಜ್ ಕಾರು ಹೊರಟಿತ್ತು. ಮಧುಗಿರಿ ಕಡೆಗೆ ಟಾಟಾ ಟಿಯಾಗೋ ತೆರಳುತ್ತಿತ್ತು. ಓವರ್​ಟೇಕ್ ವೇಳೆ ಸಿಯಾಜ್ ಕಾರು ಬಲಬದಿ ಲೇನ್​ಗೆ ನುಗ್ಗಿ ಅಪಘಾತ ಸಂಭವಿಸಿದೆ. ಸಿಯಾಜ್ ಕಾರಿನಲ್ಲಿ ಚಾಲಕ ಸಮೇತ ಒಟ್ಟು 7 ಜನ ಪ್ರಯಾಣಿಸುತ್ತಿದ್ದರು. ಹಬ್ಬ ಮುಗಿಸಿಕೊಂಡು ವಾಪಸ್​ ಬೆಂಗಳೂರಿಗೆ ಹಿಂದಿರುಗುತ್ತಿದ್ದರು. ಎದುರಿಗೆ ಬರ್ತಿದ್ದ ಟಾಟಾ ಟಿಯಾಗೋ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟಿದ್ದಾರೆ. ಮಧುಗಿರಿ ಕಡೆಗೆ ಹೋಗ್ತಿದ್ದ ನಾಗರಾಜ್, ಸಿದ್ದಗಂಗಾ ಮೃತಪಟ್ಟಿದ್ದಾರೆ. ಬೆಂಗಳೂರಿಗೆ ಹೋಗ್ತಿದ್ದ ಸಿಂಧೂ, ಜನಾರ್ಧನ್ ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಉಳಿದ ಗಾಯಾಳುಗಳಿಗೆ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ವೆಂಕಟ್ ಮಾಹಿತಿ ನೀಡಿದರು.



Join Whatsapp
Exit mobile version