ತುಮಕೂರಿನಲ್ಲಿ ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಪ್ರಕರಣ: ಐವರು ಪೊಲೀಸ್ ವಶಕ್ಕೆ

Prasthutha|

- Advertisement -

ಮೀಟರ್ ಬಡ್ಡಿ ವ್ಯವಹಾರ ನಡೆಸುವವರ ವಿರುದ್ಧ ಕಾನೂನು ಕ್ರಮ ಎಂದ ಸಚಿವ ಡಾ.ಜಿ.ಪರಮೇಶ್ವರ್

ತುಮಕೂರು: ಒಂದೇ ಕುಟುಂಬದ ಐದು ಮಂದಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

ಜಿಲ್ಲಾ ಆಸ್ಪತ್ರೆಯ ಶವಾಗಾರಕ್ಕೆ ಇಂದು ಗೃಹ ಸಚಿವ ಪರಮೇಶ್ವರ್ ಅವರು ಭೇಟಿ ನೀಡಿ, ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕರೀಬ್ ಸಾಬ್ ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದ ಐದು ಜನರನ್ನು ವಶಕ್ಕೆ ಪಡೆಯಲಾಗಿದೆ. ಆತ್ಮಹತ್ಯೆಯ ಹಿಂದೆ ಬಡ್ಡಿ ವ್ಯವಹಾರ ಇದೆ ಎಂದು ಜನರು ಮಾತನಾಡುತ್ತಿದ್ದಾರೆ. ಅದನ್ನು ಗಂಭೀರವಾಗಿ ತೆಗದುಕೊಂಡು, ಬಡ್ಡಿ ವ್ಯವಹಾರವನ್ನು ನಿಲ್ಲಿಸಲು ಕ್ರಮ ತೆಗೆದುಕೊಳ್ಳುತ್ತೇವೆ. ಬಡ್ಡಿ ವ್ಯವಹಾರ ಮಾಡುವವರ ವಿರುದ್ಧ ಕಾನೂನು ಕ್ರಮಕೈಗೊಳ್ಳುತ್ತೇವೆ. ತನಿಖೆಯ ನಂತರ ಆತ್ಮಹತ್ಯೆಗೆ ಕಾರಣ ಏನು ಎಂಬುವುದು ತಿಳಿಯಲಿದೆ ಎಂದು ಹೇಳಿದರು

Join Whatsapp