ಪಕ್ಕದ ಮನೆಯವರಿಂದ ಕಿರುಕುಳ ಆರೋಪ: ಒಂದೇ ಕುಟುಂಬದ ಐವರು ಆತ್ಮಹತ್ಯೆ

Prasthutha|

- Advertisement -

ತುಮಕೂರು: ಒಂದೇ ಕುಟುಂಬದ ಐವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಸದಾಶಿವನಗರದಲ್ಲಿ ನಡೆದಿದೆ.

ಅಕ್ಕಪಕ್ಕದ ಮನೆಯವರ ಕಿರುಕುಳ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಲಾಗಿದೆ. ಗರೀಬ್‌ ಸಾಬ್‌ (36), ಸುಮಯಾ (30), ಹಾಜೀರಾ ( 14) , ಮಹ್ಮಮದ್ ಶುಭಾನ್ (10) ಮಹ್ಮದ್ ಮುನೀರ್ ( 8) ಮೃತರು.

- Advertisement -

ಶಿರಾ ತಾಲೂಕಿನ ಚಿಕ್ಕನಹಳ್ಳಿಯ ನಿವಾಸಿ. ನಗರದ ಸದಾಶಿವನಗರದಲ್ಲಿ ಕಬಾಬ್‌ ಅಂಗಡಿ ನಡೆಸುತ್ತಾ, ಜೀವನ ಸಾಗಿಸುತ್ತಿದ್ದರು. ಮಕ್ಕಳ ವಿದ್ಯಾಭ್ಯಾಸಕ್ಕಾಗಿ ನಗರದಲ್ಲಿ ವಾಸವಿದ್ದರು. ‘ಕೆಳಗಡೆ ಬಾಡಿಗೆಗೆ ಇದ್ದ ಕಲಂದರ್‌ ಎಂಬುವರು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಅವರೇ ನಮ್ಮ ಸಾವಿಗೆ ಕಾರಣ ಎಂದು’ ವಿಡಿಯೊ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಭೇಟಿ ನೀಡಿದ್ದಾರೆ.

Join Whatsapp