Home ಟಾಪ್ ಸುದ್ದಿಗಳು ತುಂಗಭದ್ರಾ ಡ್ಯಾಂನ ರಾಜ್ಯ ಸರ್ಕಾರ ಕಂಟ್ರೋಲ್ ಮಾಡಲ್ಲ: ಡಿ.ಕೆ ಶಿವಕುಮಾರ್

ತುಂಗಭದ್ರಾ ಡ್ಯಾಂನ ರಾಜ್ಯ ಸರ್ಕಾರ ಕಂಟ್ರೋಲ್ ಮಾಡಲ್ಲ: ಡಿ.ಕೆ ಶಿವಕುಮಾರ್

ಬೆಂಗಳೂರು: ತುಂಗಭದ್ರಾ ಜಲಾಶಯವನ್ನು ರಾಜ್ಯ ಸರ್ಕಾರ ಕಂಟ್ರೋಲ್ ಮಾಡಲ್ಲ. ಅದಕ್ಕೇ ಆದ ಪ್ರತ್ಯೇಕ ಸಮಿತಿಯಿದೆ. ನಾವು ಸದಸ್ಯರು ಅಷ್ಟೇ. ಆದರೂ ಅದು ನಮ್ಮದೇ. ಇನ್ನೂ 4-5 ದಿನಗಳಲ್ಲಿ ಗೇಟ್ ರಿಪೇರಿ ಮಾಡುವ ಕೆಲಸ ಆಗುತ್ತದೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅಭಯ ನೀಡಿದರು.


ತುಂಗಭದ್ರಾ ಜಲಾಶಯಕ್ಕೆ ಭೇಟಿ ನೀಡಿದ ವಿಚಾರವಾಗಿ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಟಿಬಿ ಡ್ಯಾಮ್ ಗೆ ಹೋಗಿ ವೀಕ್ಷಣೆ ಮಾಡಿ, ಕೂಡಲೇ ಕ್ರಮ ತೆಗೆದುಕೊಂಡಿದ್ದೇವೆ. ಎಲ್ಲಾ ಗುತ್ತಿಗೆದಾರರ ಜೊತೆ ಮಾತಾಡಿದ್ದೇನೆ. ಡಿಸೈನ್ ಗಳನ್ನ ಕಳಿಸಿಕೊಟ್ಟಿದ್ದೇವೆ ಎಂದರು.


ಇನ್ನೂ 4-5 ದಿನಗಳಲ್ಲಿ ರಿಪೇರಿ ಕೆಲಸ ಆಗುತ್ತೆ. ರೈತರ ಬೆಳೆ ಉಳಿಸುವ ವ್ಯವಸ್ಥೆ ಮಾಡಿದ್ದೇವೆ. ನಾಳೆ (ಆ.13) ನಮ್ಮ ಸಿಎಂ ಹೋಗ್ತಾರೆ. ನಾನು ಟೆಕ್ನಿಕಲ್ ಟೀಮ್ ಜೊತೆಗೆ ಚರ್ಚೆ ಮಾಡಿದ್ದೇನೆ. ಯಾರೂ ಗಾಬರಿ ಪಡಬೇಕಿಲ್ಲ ಎಂದು ಅಭಯ ನೀಡಿದರು.

Join Whatsapp
Exit mobile version