ಆಂಬರ್ ಗ್ರೀಸ್ ಮಾರಾಟ ಯತ್ನ: ಇಬ್ಬರ ಬಂಧನ

Prasthutha|

ಬೆಂಗಳೂರು: ಬನಶಂಕರಿಯ ಬನಗಿರಿ ಬಳಿ ಆಂಬರ್ ಗ್ರೀಸ್ (ತಿಮಿಂಗಲ ವಾಂತಿ) ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸರು ಯಶಸ್ವಿಯಾಗಿದ್ದಾರೆ.

- Advertisement -


ಬನಶಂಕರಿ 2ನೇ ಹಂತದ ಮುಹಮ್ಮದ್ ರಿಯಾಜ್ ಅಹ್ಮದ್ (58) ಹಾಗೂ ಮುಹಮ್ಮದ್ ಗೌಸ್ (51) ಬಂಧಿತ ಆರೋಪಿಗಳು. ಇವರಿಂದ ಕೋಟ್ಯಂತರ ಬೆಲೆಬಾಳುವ 3 ಕೆಜಿ 600 ಗ್ರಾಂ ತೂಕದ ಅಂಬರ್ ಗ್ರೀಸ್ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.


ಕಳೆದ ಜ. 26ರಂದು ದಕ್ಷಿಣ ಪೊಲೀಸ್ ವಿಭಾಗ ವ್ಯಾಪ್ತಿಯ ಬನಶಂಕರಿ 3ನೇ ಹಂತದ ಬನಗಿರಿ ನಗರದಲ್ಲಿ ಆರೋಪಿಗಳು ಅನುಮಾನಾಸ್ಪದವಾಗಿ ಓಡಾಡುತ್ತಿದ್ದರು. ಈ ಬಗ್ಗೆ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಂಬರ್ ಗ್ರೀಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ಸಂಗತಿ ಬೆಳಕಿಗೆ ಬಂದಿದೆ.

- Advertisement -


ಹೊರ ರಾಜ್ಯಗಳಿಂದ ಅಂಬರ್ ಗ್ರೀಸ್ ಖರೀದಿಸಿ ನಗರದಲ್ಲಿ ಮಾರಾಟ ಮಾಡಲು ಗಿರಾಕಿಗಳನ್ನು ಹುಡುಕುತ್ತಿದ್ದೆವು ಎಂದು ವಿಚಾರಣೆ ವೇಳೆ ಆರೋಪಿಗಳು ಬಾಯಿ ಬಿಟ್ಟಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Join Whatsapp