ಶಾಲಾ ಬಸ್-‌ ಸರ್ಕಾರಿ ಬಸ್‌ ನಡುವೆ ಭೀಕರ ಅಪಘಾತ: ಇಬ್ಬರು ಮಕ್ಕಳು ಮೃತ್ಯು

Prasthutha|

ರಾಯಚೂರು: ಸರ್ಕಾರಿ ಬಸ್ ಹಾಗೂ ಖಾಸಗಿ ಶಾಲೆಯ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ಮಕ್ಕಳು ಮೃತಪಟ್ಟು ಹಲವರು ಗಂಭೀರ ಗಾಯಗೊಂಡ ಘಟನೆ
ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ.

- Advertisement -

ಘಟನೆಯ ತೀವ್ರತೆಗೆ ನಾಲ್ಕೈದು ಮಕ್ಕಳ ಕಾಲುಗಳು ಕತ್ತರಿಸಿ ಹೋಗಿವೆ. ಗಂಭೀರ ಗಾಯಗೊಂಡ ಮಕ್ಕಳನ್ನು ರಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗೆ ಕಳುಹಿಸಲಾಗಿತ್ತು, ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನು ಕೆಲವರ ಸ್ಥಿತಿ ಗಂಭೀರವಾಗಿದೆ. ಉಳಿದ ಮಕ್ಕಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಮಾನ್ವಿ ಹೊರ ವಲಯದ ಲೊಯೊಲ ಶಾಲೆಯ ಮಕ್ಕಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಮತ್ತು ಸಾರಿಗೆ ಬಸ್ ನಡುವೆ ಡಿಕ್ಕಿ ಸಂಭವಿಸಿದೆ.



Join Whatsapp