ದ.ಕನ್ನಡ ಸೇರಿದಂತೆ 5 ಜಿಲ್ಲೆಗಳಲ್ಲಿ ಎರಡು ದಿನ ಬಿರುಗಾಳಿ, ಭಾರೀ ಮಳೆಯ ಎಚ್ಚರಿಕೆ

Prasthutha|

ಬೆಂಗಳೂರು: ಉಡುಪಿ, ದ.ಕನ್ನಡ, ಉ.ಕನ್ನಡ, ಚಿಕ್ಕಮಗಳೂರು ಮತ್ತು ಶಿವಮೊಗ್ಗದಲ್ಲಿ ಸೋಮವಾರ ಹಾಗೂ ಮಂಗಳವಾರ ಭಾರಿ ಮಳೆ ಬೀಳುವ ಸಾಧ್ಯತೆ ಇದೆಯೆಂದು ತಿಳಿಸಿದ ಹವಾಮಾನ ಇಲಾಖೆ, ಆರೆಂಜ್​ ಅರ್ಲಟ್​ ಘೋಷಿಸಿದೆ. ಕರಾವಳಿ ತೀರದುದ್ದಕ್ಕೂ ಪ್ರತಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ ಎಂದಿದೆ.

- Advertisement -

ಮೂಲ್ಕಿಯಿಂದ ಮಂಗಳೂರಿನವರೆಗೆ, ಉತ್ತರ ಕನ್ನಡದ ಮಾಜಾಳಿಯಿಂದ ಭಟ್ಕಳವರೆಗೆ ಎತ್ತರದ ಅಲೆಗಳು ಏಳಲಿವೆ. ಉಡುಪಿಯ ಬೈಂದೂರಿನ ಕಾಪುವರೆಗೆ ಹೈ ವೇವ್​ ವಾಚ್​ ಅರ್ಲಟ್​ ನೀಡಲಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಇಲಾಖೆ ಎಚ್ಚರಿಕೆ ಕೊಟ್ಟಿದೆ. ಬೆಳಗಾವಿ, ಬೀದರ್​, ಕಲಬುರಗಿ, ಯಾದಗಿರಿಯಲ್ಲಿ ಜು.8ರಿಂದ ಮುಂದಿನ ಎರಡು ದಿನ ಯೆಲ್ಲೋ ಅರ್ಲಟ್​ ಇರಲಿದೆ.

ಅರಬ್ಬಿ ಸಮುದ್ರದ ಕಡೆಯಿಂದ ಭಾರಿ ಗಾಳಿ ಬೀಸುತ್ತಿದ್ದು ಸಮುದ್ರ ಕೊರೆತ ಹೆಚ್ಚಿದೆ.



Join Whatsapp