ಸೂರತ್ ಕಾರ್ಖಾನೆಯಲ್ಲಿ ಬೆಂಕಿ ಅವಘಡ: ಇಬ್ಬರು ಬಲಿ, 70 ಕ್ಕೂ ಅಧಿಕ ಮಂದಿಯ ರಕ್ಷಣೆ

Prasthutha|

ಅಹಮದಾಬಾದ್: ಗುಜರಾತ್ ನ ಸೂರತ್ ನ ಐದು ಅಂತಸ್ತಿನ ಕಾರ್ಖಾನೆವೊಂದರಲ್ಲಿ ಇಂದು ಬೆಳಗ್ಗೆ ನಡೆದ ಭಾರೀ ಬೆಂಕಿ ಅವಘಡದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಕಡೋದರ ಕೈಗಾರಿಕಾ ಘಟಕದಲ್ಲಿ ಅಗ್ನಿ ದುರಂತ ನಡೆದಿದ್ದು, ಘಟನಾ ಸ್ಥಳದಿಂದ 70 ಕ್ಕೂ ಅಧಿಕ ಜನರನ್ನು ರಕ್ಷಿಸಲಾಗಿದೆ. ಅಗ್ನಿ ದುರಂತದಲ್ಲಿ ಹಲವು ಕಾರ್ಮಿಕರು ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

ಸೋಮವಾರ ಬೆಳಗ್ಗಿನ ಜಾವ 4.30ರ ಸುಮಾರಿಗೆ ವಿವಾ ಪ್ಯಾಕೇಜಿಂಗ್ ಕಂಪೆನಿಯಲ್ಲಿ ಬೆಂಕಿ ಅವಘಡ ನಡೆದಿದೆ ಎಂದು ಕಡೋದರ ಪೊಲೀಸ್ ಇನ್ಸ್ ಪೆಕ್ಟರ್ ಹೇಮಂತ್ ಪಟೇಲ್ ತಿಳಿಸಿದ್ದಾರೆ.

ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಿದ್ದಾರೆ.

Join Whatsapp