ತಮಿಳುನಾಡು । ಉತ್ಸವದಲ್ಲಿ ಕಾಲ್ತುಳಿತಕ್ಕೆ ಇಬ್ಬರು ಬಲಿ; 8 ಮಂದಿಗೆ ಗಾಯ

Prasthutha|

ಮಧುರೈ: ವೈಗೈ ನದಿ ಉತ್ಸವದ ವೇಳೆ ಉಂಟಾದ ಕಾಲ್ತುಳಿತಕ್ಕೆ ಓರ್ವ ಮಹಿಳೆ ಸೇರಿ ಇಬ್ಬರು ಸಾವನ್ನಪ್ಪಿದ್ದಾರೆ. ದುರ್ಘಟನೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ಮಧುರೈನ ಭಗವಾನ್ ಕಲ್ಹಝಗರ್ ಎಂಬಲ್ಲಿ ದುರ್ಘಟನೆ ನಡೆದಿದೆ. ಇಲ್ಲಿನ ವೈಗೈ ನದಿಯಲ್ಲಿ ವರ್ಷಂಪ್ರತಿ ಉತ್ಸವ ನಡೆಯುತ್ತೆ. ಆದರೆ ಕೋವಿಡ್ – 19 ನಿಷೇಧದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಉತ್ಸವ ನಡೆದಿರಲಿಲ್ಲ. ಎರಡು ವರ್ಷಗಳ ಬಳಿಕ ಉತ್ಸವ ವೀಕ್ಷಿಸಲು ಅಪಾರ ಜನಸ್ತೋಮ ನೆರೆದಿತ್ತು.

ಜನರು ಉತ್ಸವ ವೀಕ್ಷಿಸಿ ಹಿಂದಿರುಗುತ್ತಿದ್ದಾಗ ನದಿಯ ಪ್ರವೇಶ ಜಾಗವಾದ ಭಗವಾನ್ ಕಲ್ಹಝಗರ್ ಎಂಬಲ್ಲಿ ಕಾಲ್ತುಳಿತ ಉಂಟಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತರ ಕುಟುಂಬಗಳಿಗೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಗಂಭೀರವಾಗಿ ಗಾಯಗೊಂಡವರಿಗೆ 2 ಲಕ್ಷ ರೂ. , ಸಾಮಾನ್ಯ ಗಾಯಗೊಂಡವರಿಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

Join Whatsapp