ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಸಮುದ್ರಪಾಲು

Prasthutha|

ಉಡುಪಿ: ಮೀನುಗಾರಿಕೆಗೆ ತೆರಳಿದ್ದ ಇಬ್ಬರು ಮೀನುಗಾರರು ಸಮುದ್ರಪಾಲಾದ ಘಟನೆ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಅಳ್ವೆ ಗದ್ದೆ ಬಳಿ ನಡೆದಿದೆ.
ಗಂಗೊಳ್ಳಿ ಗ್ರಾಮದ ಮುಸಾಬ್ (22) ಮತ್ತು ನಜಾನ್‌ (24) ಕಾಣೆಯಾದ ಮೀನುಗಾರರು.

- Advertisement -

ನಾಲ್ವರು ಮೀನುಗಾರರು ಕೈರಂಪಣಿ ಬಲೆ ಬೀಸಿ ಮೀನುಗಾರಿಕೆ ಮಾಡುತ್ತಿದ್ದರು. ಅದರಂತೆ ಬಲೆ ಬೀಸುತ್ತಿದ್ದಾಗ ನಾಲ್ವರ ಪೈಕಿ ಇಬ್ಬರು ಆಯತಪ್ಪಿ ನೀರಿಗೆ ಬಿದ್ದಿದ್ದಾರೆ. ಉಳಿದ ಇಬ್ಬರು ಕೂಡಲೇ ರಕ್ಷಣೆಗೆ ಮುಂದಾದರೂ ಪ್ರಯೋಜನವಾಗಿಲ್ಲ. ಹೀಗಾಗಿ ಅವರಿಬ್ಬರು ಸ್ಥಳೀಯರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳೀಯರು ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ದಳ ಮತ್ತು ಪೊಲೀಸರು ಮುಸಾಬ್ ಮತ್ತು ನಜಾನ್​​ಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

Join Whatsapp