ಲಾರಿಗೆ ಕಾರು ಡಿಕ್ಕಿ: ಇಬ್ಬರು ಸಾವು, ನಾಲ್ವರಿಗೆ ಗಾಯ

Prasthutha|

ಬೆಂಗಳೂರು: ವೇಗವಾಗಿ ಬಂದ ಕಾರೊಂದು ಮುಂದೆ ಹೋಗುತ್ತಿದ್ದ ಲಾರಿಗೆ ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ದಾರುಣ ಘಟನೆ ಹೊಸಕೋಟೆ ತಾಲೂಕಿನ ಅಟ್ಟೂರು ಗ್ರಾಮದ ಬಳಿ ನಡೆದಿದೆ.

- Advertisement -

ಮುರಗಮುಲ್ಲ ದರ್ಗಾಗೆ ಹೋಗಿ ವಾಪಸ್ ಆಗುತ್ತಿದ್ದ ವೇಳೆ ಅಪಘಾತ ಸಂಭವಿಸಿ ನಗರದ ಶಾಜಿಯಾ ಬಾನು (26), ಇಬ್ರಾಹಿಂ ಸಾಬ್ (16) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಾರಿನಲ್ಲಿ 9 ಜನ ಪ್ರಯಾಣಿಸುತ್ತಿದ್ದು, ನಾಲ್ವರು ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದರೆ ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.

- Advertisement -

ಗಾಯಗೊಂಡ ನಾಲ್ವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು ಅವರಲ್ಲಿ ಇಬ್ಬರು ಸ್ಥಿತಿ ಚಿಂತಾಜನಕವಾಗಿದೆ.

ಹೊಸಕೋಟೆ ಪೊಲೀಸರು ಸುದ್ದಿ ತಿಳಿದ ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆಯನ್ನು ಕೈಗೊಂಡಿದ್ದಾರೆ.



Join Whatsapp