Home ಟಾಪ್ ಸುದ್ದಿಗಳು ಅಪ್ರಾಪ್ತ ಮಕ್ಕಳಿಗೆ ಮದ್ಯ ಕುಡಿಸಿದ ಮತ್ತಿಬ್ಬರ ಸೆರೆ

ಅಪ್ರಾಪ್ತ ಮಕ್ಕಳಿಗೆ ಮದ್ಯ ಕುಡಿಸಿದ ಮತ್ತಿಬ್ಬರ ಸೆರೆ

ಬೆಂಗಳೂರು : ಅಪ್ರಾಪ್ತ ಮಕ್ಕಳಿಗೆ ಮದ್ಯ ಕುಡಿಸಿ ವಿಕೃತಿ ಮೆರೆದು ಪರಾರಿಯಾಗಿದ್ದ ಇನ್ನಿಬ್ಬರನ್ನು ರಾಮನಗರ ಪೊಲೀಸರು ಬಂಧಿಸಿದ್ದಾರೆ.

ಘಟನೆ ಸಂಬಂಧ ಕನಕಪುರ ತಾಲ್ಲೂಕಿನ  ಮರಳಿಪುರದ ಗಣೇಶ್‌ ನನ್ನು ಬಂಧಿಸಿ ತಲೆಮರೆಸಿಕೊಂಡಿದ್ದ ಇನ್ನಿಬ್ಬರರು ಆರೋಪಿಗಳಾದ ಪ್ರಮೋದ್ ಹಾಗೂ ಸೋಮಸುಂದರ್ ನನ್ನು ಕಾರ್ಯಾಚರಣೆ ನಡೆಸಿ ಬಂಧಿಸಲಾಗಿದೆ ಎಂದು ಎಸ್ ಪಿ ಗಿರೀಶ್ ತಿಳಿಸಿದ್ದಾರೆ.

ಬಂಧಿತ ಮೂವರು ಆರೋಪಿಗಳು ಮರಳಿಪುರದ ಬಾಳೆ ತೋಟವೊಂದರಲ್ಲಿ ಏಳು ಬಾಲಕರನ್ನು ಸೇರಿಸಿಕೊಂಡು ಮದ್ಯ ಪಾರ್ಟಿ ನಡೆಸಿದ್ದರು. ಮಕ್ಕಳಿಗೂ ಮದ್ಯ ಕುಡಿಸಿ ವಿಡಿಯೊ ಮಾಡಿಕೊಂಡಿದ್ದರು. ಈ ವಿಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದವು.

ಈ ಹಿನ್ನೆಲೆಯಲ್ಲಿ ಜಾಗೃತಗೊಂಡು ಸ್ವಯಂ‍ಪ್ರೇರಿತರಾಗಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ ಮಕ್ಕಳಿಗೆ ಮದ್ಯ ಕುಡಿಸಿದ ವಿಡಿಯೋದಲ್ಲಿ ಇರುವವರೆಲ್ಲ ಸಂಬಂಧಿಕರೇ ಆಗಿದ್ದು ಹೆಚ್ಚಿನ ತನಿಖೆಯನ್ನು ಕೈಗೊಳ್ಳಲಾಗಿದೆ ಎಂದರು.

ಈ ನಡುವೆ ವಿಡಿಯೋದಲ್ಲಿ ಇರುವವರೆಲ್ಲ 8ರಿಂದ 13 ವರ್ಷದ ಒಳಗಿನವರಾಗಿದ್ದು. ಇವರ ಆರೋಗ್ಯ ತಪಾಸಣೆ ಮಾಡಿಸಲಾಗಿದೆ.

ಮಕ್ಕಳಿಗೆ ಯಾವುದೇ ತೊಂದರೆ ಇಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಈ ಎಲ್ಲರಿಗೂ ಆಪ್ತ ಸಮಾಲೋಚನೆ ಸಹ ಮಾಡಿದ್ದು, ವಿಡಿಯೊ ಕಾನ್ಫರೆನ್ಸ್ ಮೂಲಕ ಮಕ್ಕಳ ಕಲ್ಯಾಣ ಸಮಿತಿ ಮುಂದೆ ಹಾಜರುಪಡಿಸಿದ್ದೇವೆ ಎಂದು ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ತಿಳಿಸಿದ್ದಾರೆ.

Join Whatsapp
Exit mobile version