ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ: ಕೊಲೆ ಶಂಕೆ!

Prasthutha|

ದಾವಣಗೆರೆ, ಜು.30: ನಗರದ ಹೊರವಲಯದಲ್ಲಿರುವ ಆಂಜನೇಯ ಕಾಟನ್ ಮಿಲ್ ಪ್ರದೇಶದಲ್ಲಿ ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆಯಾಗಿದ್ದು, ಕೊಲೆ ಶಂಕೆ ವ್ಯಕ್ತವಾಗಿದೆ.

- Advertisement -

ಗೌರಮ್ಮ (34) ಮತ್ತು ರಾಧಮ್ಮ (32) ಮೃತ ಸಹೋದರಿಯರು.

ಈ ಇಬ್ಬರು ಆಂಜನೇಯ ಕಾಟನ್ ಮಿಲ್ ಪ್ರದೇಶದ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದರು. ಮನೆಯಿಂದ ಕೆಟ್ಟ ವಾಸನೆ ಬಂದ ಹಿನ್ನೆಲೆಯಲ್ಲಿ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ಬಾಗಿಲು ತೆರೆದು ಪರಿಶೀಲಿಸಿದಾಗ ಅಕ್ಕ-ತಂಗಿಯರ ಶವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಘಟನೆ ಜರುಗಿ ಮೂರರಿಂದ ನಾಲ್ಕು ದಿನವಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.

- Advertisement -

ಮೃತ ಸಹೋದರಿಯರು ಮೂಲತಃ ಬಳ್ಳಾರಿ ಜಿಲ್ಲೆಯ ಕೂಡ್ಲಗಿ ತಾಲೂಕಿನ ಬೆನಕನಹಳ್ಳಿಯವರು ಎಂದು ತಿಳಿದುಬಂದಿದ್ದು, ಕೆಲ ತಿಂಗಳ ಹಿಂದಷ್ಟೇ ಆಂಜನೇಯ ಕಾಟನ್ ಮಿಲ್ ನಲ್ಲಿ ಕೆಲಸಕ್ಕೆ ಸೇರಿಕೊಂಡಿದ್ದರು. ಈ ಕುರಿತು ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

Join Whatsapp