ಕೊಡಗು | ಕೌಟುಂಬಿಕ ಕಲಹ ಹಿನ್ನೆಲೆ : ಸಹೋದರಿಯರಿಬ್ಬರು ಆತ್ಮಹತ್ಯೆ

Prasthutha|

ಕೊಡಗು: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಇಬ್ಬರು ಸಹೋದರಿಯರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಬಿ.ಶೆಟ್ಟಿಗೇರಿ ಗ್ರಾಮದಲ್ಲಿ ನಡೆದಿದೆ. ಮೃತ ಸಹೋದರಿಯರನ್ನು ದಮಯಂತಿ(20) ಹರ್ಷಿತಾ(18) ಎಂದು ಗುರುತಿಸಲಾಗಿದೆ.

- Advertisement -


ನಾಮೇರ ಉದಯ ಎಂಬವರ ಇಬ್ಬರು ಪುತ್ರಿಯರಾದ ದಮಯಂತಿ ಮತ್ತು ಹರ್ಷಿತಾ ಕೌಟುಂಬಿಕ ಕಲಹಕ್ಕೆ ಬೇಸತ್ತುಕೊಂಡು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಹಳ್ಳಿಗಟ್ಟು ಸಿಇಟಿ ಕಾಲೇಜಿನಲ್ಲಿ ಅಕ್ಕ ದಮಯಂತಿ ಇಂಜಿನಿಯರಿಂಗ್ ಓದುತ್ತಿದ್ದಳು. ಕಾವೇರಿ ಕಾಲೇಜಿನಲ್ಲಿ ಹರ್ಷಿತಾ ಪ್ರಥಮ ವರ್ಷದ ಬಿಎ ವಿದ್ಯಾರ್ಥಿನಿಯಾಗಿದ್ದಳು.

ಗೋಣಿಕೊಪ್ಪಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೆತ್ತಿಕೊಂಡಿದ್ದಾರೆ.

Join Whatsapp