ಮಲ್ಪೆ | ಸೈಂಟ್ ಮೇರಿಸ್ ದ್ವೀಪದಲ್ಲಿ ಮತ್ತೆ ದುರಂತ; ಈಜಲು ಇಳಿದಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲು

Prasthutha|

ಮಲ್ಪೆ: ಮಲ್ಪೆಯ ಸೈಂಟ್ ಮೇರಿಸ್ ದ್ವೀಪದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಮೋಜಿಗಾಗಿ ಈಜಾಡಲೆಂದು ಸಮುದ್ರಕ್ಕಿಳಿದಿದ್ದ ಇಬ್ಬರು ವಿದ್ಯಾರ್ಥಿಗಳು ನೀರುಪಾಲಾಗಿದ್ದಾರೆ. ಬೆಂಗಳೂರಿನಿಂದ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರುಪಾಲಾಗಿ, ಒಬ್ಬನ ಮೃತದೇಹ ಪತ್ತೆಯಾಗಿದೆ. ಇನ್ನೊಬ್ಬರಿಗೆ ಶೋಧ ಕಾರ್ಯ ಮುಂದುವರೆದಿದೆ.

- Advertisement -


ನೀರುಪಾಲಾದ ವಿದ್ಯಾರ್ಥಿಗಳು ಯಲಹಂಕ ಜಿ.ಕೆ.ವಿ.ಕೆ. ಕೃಷಿ ವಿಶ್ವ ವಿದ್ಯಾಲಯದಲ್ಲಿ ಕಲಿಯುತ್ತಿದ್ದು, ಮೃತರನ್ನು ಹಾವೇರಿಯ ಸತೀಶ್ ಎಂ.ನಂದಿಹಳ್ಳಿ ಮತ್ತು ಬಾಗಲ ಕೋಟೆಯ ಸತೀಶ್ ಎಸ್.ಕಲ್ಯಾಣ್ ಶೆಟ್ಟಿ ಎಂದು ಗುರುತಿಸಲಾಗಿದೆ.


65 ಜನ ವಿದ್ಯಾರ್ಥಿಗಳ ಗುಂಪು ಪ್ರವಾಸಕ್ಕೆಂದು ಮಲ್ಪೆ ಸೇಂಟ್ ಮೇರಿಸ್ ಗೆ ಬಂದಿದ್ದರು, ಸಮುದ್ರದಲ್ಲಿ ಈಜಾಡುತ್ತಿದ್ದ ವಿದ್ಯಾರ್ಥಿಗಳ ಪೈಕಿ ಸತೀಶ್ ಮತ್ತು ಕಲ್ಯಾನ್ ಸಮುದ್ರದ ತೆರೆಯ ಹೊಡೆತಕ್ಕೆ ಸಿಲುಕಿ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದಾರೆ, ಕೂಡಲೇ ಸತೀಶ್ ನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

Join Whatsapp