ಬಿಬಿಎಂಪಿ ಕಸದ ಲಾರಿಗೆ ಇಬ್ಬರು ಟೆಕ್ಕಿಗಳು ಮೃತ್ಯು

Prasthutha|

ಬೆಂಗಳೂರು: ಬಿಬಿಎಂಪಿ ತ್ಯಾಜ್ಯ ವಿಲೇವಾರಿ ವಾಹನ ಹಾಗೂ ದ್ಬಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿ, ದ್ಬಿಚಕ್ರ ವಾಹನ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದಿದೆ.

- Advertisement -


ಮೃತರನ್ನ ಪ್ರಶಾಂತ್ (25), ಬಯ್ಯಣ್ಣಗಿರಿ ಶಿಲ್ಪ ಎಂದು ಗುರುತಿಸಲಾಗಿದೆ. ಬೆಂಗಳೂರಿನ ನಿವಾಸಿಯೇ ಆಗಿರುವ ಪ್ರಶಾಂತ್, ಶಿಲ್ಪಾ ಇಬ್ಬರೂ ಸ್ನೇಹಿತರಾಗಿದ್ದು, ಒಂದೇ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.
ಇಬ್ಬರೂ ಮೆಜೆಸ್ಟಿಕ್ ನಿಂದ ಕೆ.ಆರ್ ಸರ್ಕಲ್ ಮಾರ್ಗವಾಗಿ ಬೈಕ್ ನಲ್ಲಿ ಬರುತ್ತಿದ್ದರು. ಇದೇ ವೇಳೆ ಸಿಐಡಿ ಸಿಗ್ನಲ್ ಮಾರ್ಗದಿಂದ ಕೆ.ಆರ್ ವೃತ್ತದ ಮಾರ್ಗವಾಗಿ ಬಿಬಿಎಂಪಿ ಕಸದ ಲಾರಿ ವೇಗವಾಗಿ ಬರುತ್ತಿತ್ತು. ತಿರುವಿನ ಮಾರ್ಗದಲ್ಲೂ ವೇಗವಾಗಿ ಬಂದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ ಎಂದು ಪ್ರಾಥಮಿಕ ಮೂಲಗಳು ತಿಳಿಸಿವೆ.



Join Whatsapp