Home ಟಾಪ್ ಸುದ್ದಿಗಳು ಪೆಟ್ರೋಲ್ ಬಂಕ್’ನ ಟ್ಯಾಂಕ್ ಕ್ಲೀನ್ ಮಾಡುತ್ತಿದ್ದಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತ್ಯು

ಪೆಟ್ರೋಲ್ ಬಂಕ್’ನ ಟ್ಯಾಂಕ್ ಕ್ಲೀನ್ ಮಾಡುತ್ತಿದ್ದಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತ್ಯು

ತುಮಕೂರು: ಪೆಟ್ರೋಲ್ ಬಂಕ್ ನ ತಳಹದಿಯ ಟ್ಯಾಂಕ್ ಕ್ಲೀನ್ ಮಾಡುತ್ತಿದ್ದಾಗ ಉಸಿರುಗಟ್ಟಿ ಇಬ್ಬರು ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ತುಮಕೂರು ಜಿಲ್ಲೆಯ ತಿಪಟೂರು ತಾಲ್ಲೂಕಿನ ಹಿಂಡಿಸ್ಕೆರೆ ಗೇಟ್ ಬಳಿ ನಡೆದಿದೆ.

ಮೃತ ಕೂಲಿ ಕಾರ್ಮಿಕರನ್ನು ತಮಿಳುನಾಡಿನ ವೇಲೂರು ರವಿ, ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಹಾರನಹಳ್ಳಿ ನಾಗರಾಜು ಎಂದು ಗುರುತಿಸಲಾಗಿದೆ.

ಹಿಂಡಿಸ್ಕೆರೆ ಗೇಟ್ ಬಳಿಯಲ್ಲಿರುವ ಪೆಟ್ರೋಲ್ ಬಂಕ್ ನ ತಳಹದಿಯಲ್ಲಿರುವ ಟ್ಯಾಂಕನ್ನು ಯಾವುದೇ ಸುರಕ್ಷತಾ ಸಲಕರಣೆಗಳಿಲ್ಲದೆ ಸ್ವಚ್ಛಗೊಳಿಸಲು ಹೋದ ಸಂದರ್ಭದಲ್ಲಿ ಉಸಿರಾಟದ ತೊಂದರೆಯಿಂದಾಗಿ ಈ ಘಟನೆಯು ನಡೆದಿದೆ ಎಂದು ತಿಳಿದು ಬಂದಿದೆ.

Join Whatsapp
Exit mobile version