Home ಟಾಪ್ ಸುದ್ದಿಗಳು ಹಾಡಹಗಲೇ ಹಾಸನದಲ್ಲಿ ಗುಂಡಿನ ದಾಳಿ: ಇಬ್ಬರು ಯುವಕರು ಮೃತ್ಯು

ಹಾಡಹಗಲೇ ಹಾಸನದಲ್ಲಿ ಗುಂಡಿನ ದಾಳಿ: ಇಬ್ಬರು ಯುವಕರು ಮೃತ್ಯು

ಹಾಸನ : ಗುಂಡು ಹಾರಿಸಿ ಇಬ್ಬರು ವ್ಯಕ್ತಿಗಳನ್ನು ಹತ್ಯೆ ಮಾಡಿರುವ ಘಟನೆ ಹಾಸನದ ಹೊಯ್ಸಳ ನಗರ ಬಡಾವಣೆಯಲ್ಲಿ ನಡೆದಿದೆ.

ಹತ್ಯೆಯಾದ ಪೈಕಿ ಓರ್ವನ ಹೆಸರು ಶರಫತ್ ಅಲಿ ಎಂದು ತಿಳಿದು ಬಂದಿದ್ದು, ಮತ್ತೊಬ್ಬ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಮೃತ ಶರಫತ್ ಅಲಿ ಶುಂಠಿ ವ್ಯಾಪಾರಿಯಾಗಿದ್ದು, ಇತ್ತೀಚಿಗೆ ರಿಯಲ್ ಎಸ್ಟೇಟ್ ಉದ್ಯಮ ನಡೆಸುತ್ತಿದ್ದರು ಎನ್ನಲಾಗಿದೆ.


ಒಬ್ಬರನ್ನು ಕಾರಿನಲ್ಲಿ ಹತ್ಯೆ ಮಾಡಲಾಗಿದ್ದು, ಕಾರಿನ ಬಳಿ ಮತ್ತೊಬ್ಬರ ಕೊಲೆಯಾಗಿದೆ. ಆಸ್ತಿ ವಿಚಾರಕ್ಕೆ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.


ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೀತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬೆರಳಚ್ಚು ತಜ್ಞರು, ಎಫ್ಎಸ್ಎಲ್ ತಜ್ಞರಿಂದ ಪರಿಶೀಲನೆ ನಡೆಸಲಾಗಿದೆ. ಹಾಸನದ ಕೆಆರ್ ಪುರಂ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಆರೋಪಿಗಳ ಪತ್ತೆ ಪೊಲಿಸರು ಮುಂದಾಗಿದ್ದಾರೆ.

Join Whatsapp
Exit mobile version