ಕುತ್ತಾರಿನಲ್ಲಿ ಯುವಕರಿಬ್ಬರಿಗೆ ಚೂರಿ ಇರಿತ | ಆಸ್ಪತ್ರೆಗೆ ದಾಖಲು

Prasthutha|

ಕುತ್ತಾರು : ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಕೃಷ್ಣಕೋಡಿ ಎಂಬಲ್ಲಿ ನಿನ್ನೆ ತಡರಾತ್ರಿ ಬೈಕ್ ನಲ್ಲಿ ತೆರಳುತ್ತಿದ್ದ ಯುವಕರಿಬ್ಬರಿಗೆ ಇನ್ನೊಂದು ಬೈಕ್ ನಲ್ಲಿ ಬಂದವರು ಚೂರಿ ಇರಿದು ಪರಾರಿಯಾದ ಘಟನೆ ನಡೆದಿದೆ.

- Advertisement -

ಇರಿತಕ್ಕೊಳಗಾದವರು ಸೇವಂತಿಗುಡ್ಡೆ ನಿವಾಸಿ ಆದಿತ್ಯ (23) ಮತ್ತು ಪಂಡಿತ್ ಹೌಸ್ ನಿವಾಸಿ ಪವನ್ (27) ಎಂದು ಗುರುತಿಸಲಾಗಿದೆ.

ಆದಿತ್ಯ ಮತ್ತು ಪವನ್ ಚರ್ಚ್ ಒಂದರಲ್ಲಿ ಕ್ಯಾಟರಿಂಗ್ ಕೆಲಸಕ್ಕಿದ್ದ ಸಹೋದರನನ್ನು ಕರೆ ತರಲು ಕುತ್ತಾರ್ ನಿಂದ ಅಂಬ್ಲಮೊಗರು ಕಡೆ ಶುಕ್ರವಾರ ರಾತ್ರಿ ಹೋಗುತ್ತಿದ್ದರು ಎನ್ನಲಾಗಿದೆ. ಈ ವೇಳೆ ಕೃಷ್ಣಕೋಡಿ ಬಳಿ ಹಿಂಬದಿಯಿಂದ ಬಂದ ಅಪರಿಚಿತ ಬೈಕ್ ಇವರಿದ್ದ ಬೈಕ್ ಗೆ ಢಿಕ್ಕಿ ಹೊಡೆದು ಬಳಿಕ ಇಬ್ಬರಿಗೂ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ಗಾಯಾಳುಗಳು ದೇರಳಕಟ್ಟೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Join Whatsapp