Home ಟಾಪ್ ಸುದ್ದಿಗಳು ರಾಜಸ್ಥಾನದಲ್ಲಿ ಟೈಲರ್ ಹತ್ಯೆ ಪ್ರಕರಣ: ಇಬ್ಬರ ಬಂಧನ

ರಾಜಸ್ಥಾನದಲ್ಲಿ ಟೈಲರ್ ಹತ್ಯೆ ಪ್ರಕರಣ: ಇಬ್ಬರ ಬಂಧನ

ಉದಯಪುರ: ರಾಜಸ್ಥಾನದ ಉದಯಪುರದಲ್ಲಿ ಟೈಲರ್ ಓರ್ವನಿಗೆ ಚಾಕುವಿನಿಂದ ಇರಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಟೈಲರ್ ಅಂಗಡಿಗೆ ನುಗ್ಗಿದ ಇಬ್ಬರು ದುಷ್ಕರ್ಮಿಗಳು ಟೈಲರ್ ಕನ್ಹಯ್ಯಾ ಲಾಲ್ ಎಂಬಾತನ ಹತ್ಯೆ ನಡೆಸಿದ್ದರು.

ಟೈಲರ್ ಹತ್ಯೆ ಮಾಡುವುದನ್ನು ವೀಡಿಯೋ ಮಾಡಿ ಹರಿಯಬಿಟ್ಟು, ನಾವೇ ಹತ್ಯೆ ಮಾಡಿರುವುದಾಗಿ ವೀಡಿಯೋದಲ್ಲಿ ಇಬ್ಬರು ಯುವಕರು ಹೇಳಿದ್ದರು. ಹತ್ಯೆಗೊಳಗಾದ ಕನ್ನಯ್ಯಲಾಲ್ ಈ ಹಿಂದೆ ಪ್ರವಾದಿಯವರನ್ನು ಅವಹೇಳನ ಮಾಡಿದ್ದ ಬಿಜೆಪಿ ನಾಯಕಿ ನೂಪುರ್ ಶರ್ಮಾ ಬೆಂಬಲಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದ್ದು, ಇದಕ್ಕಾಗಿ ಟೈಲರ್ ಅನ್ನು ಹತ್ಯೆಗೈಯ್ಯಲಾಗಿದೆ ಎಂಬ ಆರೋಪವೂ ಕೇಳಿ ಬಂದಿದೆ.

Join Whatsapp
Exit mobile version