Home ಟಾಪ್ ಸುದ್ದಿಗಳು ಯು.ನಿಸಾರ್ ಅಹ್ಮದ್ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ನೇಮಕ

ಯು.ನಿಸಾರ್ ಅಹ್ಮದ್ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾಗಿ ನೇಮಕ

ಬೆಂಗಳೂರು: ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರನ್ನಾಗಿ ನಿವೃತ್ತ ಐಜಿಪಿ ಯು. ನಿಸಾರ್ ಅಹ್ಮದ್ ಅವರನ್ನು ಸರಕಾರ ನಾಮ ನಿರ್ದೇಶನ ಮಾಡಿ ಆದೇಶಿಸಿದೆ.

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ ಮತ್ತು ಅವರ ಹೆಸರಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಹಜ್ ಮತ್ತು ವ್ಯಕ್ಫ್ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಾಗರಾಜ ಆದೇಶ ಹೊರಡಿಸಿದ್ದಾರೆ.

ವಿಧಾನ ಪರಿಷತ್‌ನ ಮಾಜಿ ಸದಸ್ಯ ಅಬ್ದುಲ್ ಅಜೀಂ ನಾಮ ನಿರ್ದೇಶನ ಹಿಂಪಡೆದಿರುವ ರಾಜ್ಯ ಸರ್ಕಾರದ ಕ್ರಮವನ್ನುಕರ್ನಾಟಕ ಹೈಕೋರ್ಟ್‌ ಕೆಲವು ದಿನಗಳ ಹಿಂದೆ ಎತ್ತಿ ಹಿಡಿದಿತ್ತು.

ಹೈಕೋರ್ಟ್‌ ತೀರ್ಪಿನ ಬಳಿಕ ಕರ್ನಾಟಕ ರಾಜ್ಯ ಆಯೋಗದ ಅಧ್ಯಕ್ಷ ಹುದ್ದೆಗೆ ಕರ್ನಾಟಕ ಸರ್ಕಾರ ಹೊಸ ಅಧ್ಯಕ್ಷರನ್ನು ನಾಮ ನಿರ್ದೇಶನ ಮಾಡಿದೆ.

Join Whatsapp
Exit mobile version