ರಾಷ್ಟ್ರೀಯ ಮಟ್ಟದ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆ: ಯು.ಟಿ.ಖಾದರ್ ಅಭಿನಂದನೆ

Prasthutha|

ಮಂಗಳೂರು: ರಾಷ್ಟ್ರೀಯ ಮಟ್ಟದ ಕಬಡ್ಡಿ ಕ್ರೀಡಾಕೂಟಕ್ಕೆ ಆಯ್ಕೆಯಾದ ಮಂಗಳೂರು ವಿಶ್ವವಿದ್ಯಾನಿಲಯದ ಆಟಗಾರರರಿಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಭಿನಂದನೆ ಸಲ್ಲಿಸಿದ್ದಾರೆ.

- Advertisement -


ಬೆಂಗಳೂರಿನಲ್ಲಿ ಜರಗಿದ ದಕ್ಷಿಣ ಭಾರತ ಅಂತರ್ ವಿಶ್ವ ವಿದ್ಯಾಲಯ ಕಬಡ್ಡಿ ಪಂದ್ಯಾಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದ್ವಿತೀಯ ಸ್ಥಾನ ಪಡೆದು ರೋತಕ್ ಹರಿಯಾಣದಲ್ಲಿ ನಡೆಯುವ ಅಖಿಲ ಭಾರತ ಅಂತರ್ ವಿಶ್ವ ವಿದ್ಯಾಲಯ ಕಬಡ್ಡಿ ಪಂದ್ಯಾಟಕ್ಕೆ ಅರ್ಹತೆ ಗಳಿಸಿದ ಮಂಗಳೂರು ವಿಶ್ವ ವಿದ್ಯಾನಿಲಯ ತಂಡದ ಎಲ್ಲಾ ಆಟಗಾರರಿಗೆ ವಿಪಕ್ಷ ಉಪ ನಾಯಕ ಯು.ಟಿ.ಖಾದರ್ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.


ಸುಮಾರು 80 ತಂಡಗಳು ಭಾಗವಹಿಸಿದ್ದ ಪಂದ್ಯಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದ ಮಂಗಳೂರು ವಿಶ್ವವಿದ್ಯಾನಿಲಯ ತಂಡದ ಎಲ್ಲಾ ಆಟಗಾರರು, ಮುಖ್ಯವಾಗಿ ತಂಡದ ಪ್ರಮುಖ ಆಟಗಾರರಾದ ಉಳ್ಳಾಲದ ಸಾಯಿ, ದೈಹಿಕ ಶಿಕ್ಷಕರಾದ ಜೆರಾಲ್ಡ್ ಹಾಗೂ ಉಮಾ ಮಹೇಶ್ವರಿ ತೊಕ್ಕೋಟು ಇದರ ಗೋಪಿ ಇವರಿಗೆ ಅಭಿನಂದನೆ ಹಾಗೂ ಶುಭಾಶಯಗಳನ್ನು ಯು.ಟಿ.ಖಾದರ್ ಸಲ್ಲಿಸಿದರು.

- Advertisement -


ದಕ್ಷಿಣ ವಲಯ ಹಾಗೂ ಉತ್ತರ ವಲಯದ ತಲಾ ನಾಲ್ಕು ತಂಡಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸೆಣಸಾಡಲಿದ್ದು, ಮಂಗಳೂರು ವಿಶ್ವವಿದ್ಯಾನಿಲಯ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಶಸ್ತಿ ಗಳಿಸಲಿ ಎಂದು ಶಾಸಕ ಯು.ಟಿ.ಖಾದರ್ ರವರು ಈ ಸಂದರ್ಭದಲ್ಲಿ ಶುಭ ಹಾರೈಸಿದರು.

Join Whatsapp