ನಾಳೆ ಯುಎಪಿಎ ಪ್ರಕರಣದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಜಾಮೀನು ಅರ್ಜಿ ವಿಚಾರಣೆ

Prasthutha|

ನವದೆಹಲಿ: 2020ರ ಫೆಬ್ರವರಿಯಲ್ಲಿ ನಡೆದ ಗಲಭೆಗೆ ಪಿತೂರಿ ನಡೆಸಿದ್ದಾರೆ ಎಂಬ ಆರೋಪದಲ್ಲಿ ಯುಎಪಿಎ ಪ್ರಕರಣದಲ್ಲಿ ಬಂಧಿತರಾಗಿರುವ ಜೆಎನ್ಯು ಮಾಜಿ ವಿದ್ಯಾರ್ಥಿ ಉಮರ್ ಖಾಲಿದ್ ಅವರು ಜಾಮೀನು ಅರ್ಜಿಯ ಕುರಿತು ಜಾಮೀನು ಅರ್ಜಿಯ ಕುರಿತು ದೆಹಲಿ ಹೈಕೋರ್ಟ್ ನಾಳೆ ತೀರ್ಪು ಪ್ರಕಟಿಸಲಿದೆ.

- Advertisement -

ಎರಡು ವರ್ಷಗಳಿಂದ ಬಂಧಿತರಾಗಿರುವ ಉಮರ್ ಖಾಲಿದ್ ಅರ್ಜಿಯ ಆದೇಶವನ್ನು ಸೆಪ್ಟೆಂಬರ್ 9 ರಂದು ನ್ಯಾಯಮೂರ್ತಿಗಳಾದ ಸಿದ್ಧಾರ್ಥ್ ಮೃದುಲ್ ಮತ್ತು ರಜನೀಶ್ ಭಟ್ನಾಗರ್ ಅವರ ಪೀಠವು ಕಾಯ್ದಿರಿಸಿತ್ತು.

ಈಶಾನ್ಯ ದೆಹಲಿಯಲ್ಲಿನ ಹಿಂಸಾಚಾರದಲ್ಲಿ ತನಗೆ “ಕ್ರಿಮಿನಲ್ ಪಾತ್ರ” ಇಲ್ಲ ಅಥವಾ ಪ್ರಕರಣದ ಇತರ ಆರೋಪಿಗಳೊಂದಿಗೆ ಯಾವುದೇ “ಪಿತೂರಿಯ ಸಂಪರ್ಕ” ಇಲ್ಲ ಎಂದು ಖಾಲಿದ್ ವಾದಿಸಿದ್ದಾರೆ.

Join Whatsapp