ಗೋರಖ್ ನಾಥ್ ದೇಗುಲಕ್ಕೆ ಅತಿಕ್ರಮ ಪ್ರವೇಶ: ಆರೋಪಿ ವಿರುದ್ಧ ಯುಎಪಿಎ ಪ್ರಕರಣ ದಾಖಲು

Prasthutha|

ಲಕ್ನೋ: ಉತ್ತರ ಪ್ರದೇಶದ ಗೋರಖ್‍ನಾಥ್ ದೇವಾಲಯಕ್ಕೆ ಅತಿಕ್ರಮ ಪ್ರವೇಶಿಸಿದ ಪ್ರಕರಣದಲ್ಲಿ ಅಹ್ಮದ್ ಮುರ್ತಝಾ ಅಬ್ಬಾಸಿ ವಿರುದ್ಧ ಕಾನೂನು ಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಅನ್ವಯ ಪ್ರಕರಣ ದಾಖಲಿಸಿದೆ.

- Advertisement -

ಆರೋಪಿಯ ಪೊಲೀಸ್ ಕಸ್ಟಡಿ ಶನಿವಾರ ಮುಕ್ತಾಯವಾದ ಹಿನ್ನೆಲೆಯಲ್ಲಿ ಇದೀಗ ಅಬ್ಬಾಸಿಯನ್ನು 14 ದಿನಗಳ ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.

ಯುಎಪಿಎ ಅನ್ವಯ ತನಿಖಾ ಸಂಸ್ಥೆಗಳು ಆರೋಪಿಯನ್ನು ಸುಧೀರ್ಘ ಅವಧಿಗೆ ವಶಕ್ಕೆ ಪಡೆಯಲು ಅವಕಾಶವಿದ್ದು, ಚಾರ್ಜ್‍ಶೀಟ್ ಸಲ್ಲಿಕೆಗೆ ಕೂಡಾ ವಿಸ್ತರಿತ ಅವಧಿ ಪಡೆಯಬಹುದಾಗಿದೆ.

- Advertisement -

ಆರೋಪಿಯನ್ನು ವಿಚಾರಣೆಗೆ ಗುರಿಪಡಿಸಿದಾಗ ಉಗ್ರಗಾಮಿ ಸಂಘಟನೆಗೆ ನೆರವಿಗೆ ಸಂಬಂಧಿಸಿದ ಎಲೆಕ್ಟ್ರಾನಿಕ್ ಮತ್ತು ಹಣಕಾಸು ವ್ಯವಹಾರಗಳು ಬೆಳಕಿಗೆ ಬಂದಿರುವ ಹಿನ್ನೆಲೆಯಲ್ಲಿ ಯುಎಪಿಎ ಅನ್ವಯ ಪ್ರಕರಣ ದಾಖಲಿಸಲಾಗಿದೆ ಎಂದು ಎಟಿಎಸ್ ಹೆಚ್ಚುವರಿ ಮಹಾ ನಿರ್ದೇಶಕ ನವೀನ್ ಅರೋರಾ ಹೇಳಿದ್ದಾರೆ.



Join Whatsapp