ಉಡುಪಿ: ಬಸ್‌ ಮಗುಚಿ 6 ಮಂದಿ ಗಂಭೀರ

Prasthutha|

- Advertisement -

ಕೊಲ್ಲೂರು: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದು, ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕೊಲ್ಲೂರನಲ್ಲಿ ನಡೆದಿದೆ.

ಅಪಘಾತದಿಂದಾಗಿ 22 ಮಂದಿ ಪ್ರಯಾಣಿಕರು ಗಾಯಗೊಂಡ್ಡಿದ್ದು, ಅವರನ್ನು ಕುಂದಾಪುರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -

ಬಸ್ ನಲ್ಲಿದ್ದ 22 ಮಂದಿಗಳ ಪೈಕಿ ಸಂಕ್ರಪ್ಪ (50), ರೂಪಾ (35),
ಶ್ಯಾಮಲಮ್ಮ (42), ರತ್ನಮ್ಮ (52), ವೆಂಕಟರಮಣ (45), ಚಂದ್ರಕಲಾ (43) ಅವರಿಗೆ ಗಂಭೀರ ಗಾಯಗಳಾಗಿದ್ದು ಹೆಚ್ಚಿನ ಚಿಕಿತ್ಸೆಗೆ ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಇಬ್ಬರು ಮಹಿಳೆಯರ ಕೈ ತುಂಡಾಗಿದ್ದು, ಇಬ್ಬರ ತಲೆಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

Join Whatsapp