ಉಡುಪಿ ಜಿಲ್ಲಾದ್ಯಂತ ಶಾಲಾ ಕಾಲೇಜಿಗೆ ರಜೆ ಘೋಷಿಸಿದ ಜಿಲ್ಲಾಧಿಕಾರಿ ಕೂರ್ಮಾರಾವ್

Prasthutha|

ಉಡುಪಿ: ಗಾಳಿ ಸಹಿತ ವಿಪರೀತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ.ಇಂದು (ಜುಲೈ .05) ರಜೆ ಘೋಷಿಸಿದ್ದಾರೆ.

- Advertisement -

ಮುಂದಿನ ಎರಡು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಸೂಚನೆ ಕೊಟ್ಟಿದ್ದು, ಸುಮಾರು 200 ಮಿ.ಮೀ. ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಜಿಲ್ಲೆಯಾದ್ಯಂತ ಸೋಮವಾರ ಸಂಜೆಯಿಂದಲೇ ವರುಣನ ಅಬ್ಬರ ಜೋರಾಗಿದ್ದು, ಇಡೀ ರಾತ್ರಿ ಭಾರಿ ಮಳೆ ಸುರಿದಿದೆ. ಸೋಮವಾರ ಹೆಬ್ರಿ ತಾಲೂಕಿಗಷ್ಟೇ ರಜೆ ಘೋಷಿಸಿದ್ದು, ಮಳೆಯ ತೀವ್ರತೆ ಗಮನಿಸಿದ ಜಿಲ್ಲಾಧಿಕಾರಿಯವರು ಇಂದು ಬೆಳಗ್ಗೆ ಉಡುಪಿ ಜಿಲ್ಲೆಯಾದ್ಯಂತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿದ್ದಾರೆ.

Join Whatsapp