ಉಡುಪಿ: ಮುಸ್ಲಿಮರ ವಿರುದ್ಧ ಅವಹೇಳನಕಾರಿ ಟ್ವೀಟ್; ವೈದ್ಯನ ವಿರುದ್ಧ ಪ್ರಕರಣ ದಾಖಲು

Prasthutha|

ಉಡುಪಿ: ಸಾಮಾಜಿಕ ಜಾಲತಾಣ ‘ಎಕ್ಸ್’ ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡಿದ ಆರೋಪದಡಿ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ ಪ್ರಕರಣ ದಾಖಲಾಗಿದೆ.

- Advertisement -

ಜು.13ರಂದು ಎಕ್ಸ್ ನಲ್ಲಿ ಅಭಿ ಆಯಂಡ್ ನೀಯು ಖಾತೆಯಿಂದ ‘ಈ ಜಗತ್ತಿನಿಂದ ನೀವು ಏನಾದರೂ ಒಂದನ್ನು ಇಲ್ಲವಾಗಿಸಲು ಬಯಸುವುದಾದರೆ ಅದು ಯಾವುದು?’ ಎಂಬುದಾಗಿ ಪ್ರಶ್ನಿಸಲಾಗಿತ್ತು. ಅದಕ್ಕೆ ಡಾ.ಉಪಾಧ್ಯ ತಮ್ಮ ಲೋನ್ಲಿ ಸ್ಟ್ರೇಂಜರ್ ಖಾತೆಯಿಂದ ‘ಮುಸ್ಲಿಂ ಸಮುದಾಯ’ ಎಂದು ಪ್ರಚೋದನಕಾರಿಯಾಗಿ ಉತ್ತರಿಸಿದ್ದರು. ಇದರ ಸ್ಕ್ರೀನ್ ಶಾಟ್ ಸಾಮಾಜಿಕ ತಾಣಗಳಲ್ಲಿ ವೈರಲಾಗಿ ದೊಡ್ಡ ವಿವಾದ ಸೃಷ್ಠಿಯಾಗಿದೆ.

ಉಡುಪಿ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಸೋಷಿಯಲ್ ಮೀಡಿಯಾ ಮಾನಿಟರಿಂಗ್ ಸೆಲ್ ಇದರ ಉಸ್ತುವಾರಿ ಪೊಲೀಸ್ ಉಪನಿರೀಕ್ಷಕ (ನಿಸ್ತಂತು) ಅಜ್ಮಲ್ ಇಬ್ರಾಹಿಂ ಇ.ಎ. ನೀಡಿದ ದೂರಿನಂತೆ ಉಡುಪಿ ನಗರ ಪೊಲೀಸ್ ಠಾಣೆಯಲ್ ಪ್ರಕರಣ ದಾಖಲಾಗಿದೆ.



Join Whatsapp
Exit mobile version