Home ಟಾಪ್ ಸುದ್ದಿಗಳು ಉಡುಪಿ: ಮೇಘ ಸ್ಫೋಟಕ್ಕೆ ವೃದ್ಧೆ ಬಲಿ

ಉಡುಪಿ: ಮೇಘ ಸ್ಫೋಟಕ್ಕೆ ವೃದ್ಧೆ ಬಲಿ

ಉಡುಪಿ: ಪಶ್ಚಿಮ ಘಟ್ಟದ ತಪ್ಪಲು ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ್ದು, ಓರ್ವ ವೃದ್ಧೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.


ಭಾರಿ ಮಳೆಯಿಂದಾಗಿ ಉಡುಪಿಯಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.


ನಿನ್ನೆ ಸುರಿದ ಭಾರಿ ಮಳೆಯಲ್ಲಿ ಚಂದ್ರಾ ಗೌಡ್ತಿ(85) ಎಂಬ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಮೃತ ವೃದ್ಧೆ ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾಮದ ನಿವಾಸಿ. ನಿನ್ನೆ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ. ಇಂದು ಮುಂಜಾನೆ ಬಲ್ಲಾಡಿ ಪರಿಸದರದ ಗದ್ದೆ ಬಳಿ ವೃದ್ಧೆ ಶವ ಪತ್ತೆಯಾಗಿದೆ.


ನಿನ್ನೆ ಮೇಘಸ್ಫೋಟದಿಂದಾಗಿ ಏಕಾಏಕಿ ಭಾರಿ ಮಳೆ ಆಗಿತ್ತು. ಆಗುಂಬೆ ಘಾಟಿ ಪ್ರದೇಶದ ಸೇರಿ ಸುತ್ತಮುತ್ತ ನಿನ್ನೆ ಮಧ್ಯಾಹ್ನ 3 ಗಂಟೆಯಿಂದ 5ರವರೆಗೆ ನಿರಂತರ ಮಳೆಯಾಗಿತ್ತು. ಭಾರಿ ಮಳೆಯಿಂದಾಗಿ ಕಬ್ಬಿನಾಲೆ ಗುಡ್ಡದಿಂದ ಭಾರಿ ನೀರು ಹರಿದಿತ್ತು. ಸಂಜೆಯ ಬಳಿಕ ಮಳೆ ಕಡಿಮೆಯಾಗಿದೆ. ಸದ್ಯ ಈಗ ಮೋಡ ಕವಿದ ವಾತಾವರಣವಿದೆ.

Join Whatsapp
Exit mobile version