ಉಡುಪಿ: ಸಂಕ ದಾಟುವಾಗ ಕಾಲು ಜಾರಿ ನೀರಿಗೆ ಬಿದ್ದ ಬಾಲಕಿ

Prasthutha|


ಉಡುಪಿ: ಸಂಕ ದಾಟುವಾಗ ಬಾಲಕಿಯೋರ್ವಳು ಕಾಲು ಜಾರಿ ನೀರಿಗೆ ಬಿದ್ದ ಘಟನೆ ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕಾಲ್ತೋಡು ಗ್ರಾಮದ ಬಿಜಮಕ್ಕಿ ಸಮೀಪ ನಡೆದಿದೆ.

- Advertisement -

ಎರಡನೇ ತರಗತಿ ವಿದ್ಯಾರ್ಥಿನಿ ಸನ್ನಿಧಿಗಾಗಿ ಹುಡುಕಾಟ ನಡೆಸಲಾಗುತ್ತಿದೆ.

ಸನ್ನಿಧಿ ಶಾಲೆ ಮುಗಿಸಿ ಮನೆಗೆ ವಾಪಸಾಗುತ್ತಿದ್ದಾಗ ದುರಂತ ಸಂಭವಿಸಿದೆ. ನೀರುಪಾಲಾದ ವಿದ್ಯಾರ್ಥಿನಿ ಸನ್ನಿಧಿ ಬೊಳಂಬಳ್ಳಿ ಗ್ರಾಮದ ನಿವಾಸಿ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದ್ದು, ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Join Whatsapp