ಉಡುಪಿ: ಹೆಜ್ಜೇನು ದಾಳಿಯಿಂದ ರಕ್ಷಿಸಿಕೊಳ್ಳಲು ಸಮುದ್ರಕ್ಕೆ ಹಾರಿದ ವ್ಯಕ್ತಿ ಮೃತ್ಯು

Prasthutha|

ಪಡುಬಿದ್ರಿ : ಹೆಜ್ಜೇನು ದಾಳಿಯಿಂದ ರಕ್ಷಿಸಿಕೊಳ್ಳಲು ಸಮುದ್ರಕ್ಕೆ ಹಾರಿದ ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಉಡುಪಿ ಜಿಲ್ಲೆಯ ಪಡುಬಿದ್ರಿ ಬೀಚ್ ಬಳಿ ನಡೆದಿದೆ.

- Advertisement -

ಮೃತ ವ್ಯಕ್ತಿಯನ್ನು ಸ್ಥಳೀಯ ಮೀನುಗಾರರಾದ 65 ವರ್ಷದ ವಾಸುದೇವ ಡಿ. ಸಾಲ್ಯಾನ್ ಎಂದು ಗುರುತಿಸಲಾಗಿದೆ. ದಾಳಿಯಿಂದ ರಕ್ಷಿಸಿಕೊಳ್ಳಲು ವಾಸುದೇವ ಅವರು ಸಮುದ್ರಕ್ಕೆ ಹಾರಿದ್ದರು. ನೀರಿನಿಂದ ಮೇಲೆ ಬರಲಾಗದೆ ಅವರು ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ, ಇಬ್ಬರು ಪುತ್ರರು, ಪುತ್ರಿ ಇದ್ದಾರೆ.

ಚಂದ್ರಶೇಖರ್ ಮತ್ತು ಶಂಕರ ಅಮೀನ್ ಎಂಬುವರು ಹೆಜ್ಜೇನು ದಾಳಿಯಿಂದ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

Join Whatsapp